01. "ಎಲ್ಲಾ ಬೆರಳುಗಳೂ ಒಂದೇ ರೀತಿಯ ಅಳತೆಯನ್ನು
ಹೊಂದಿಲ್ಲ.ಆದರೆ ಅವು ಬಗ್ಗಿ ನಿಂತರೆ ಎಲ್ಲವೂ ಒಂದೇ
ಸಮನಾದೀತು. ಬದುಕಿನಲ್ಲೂ ಹಾಗೆ ನಾವು
ಬಾಗುವುದಾದರೆ ಮತ್ತು ಸನ್ನಿವೇಶಗಳಿಗೆ
ಹೊಂದಿಕೊಳುವುದಾದರೆ ಬದುಕು ತುಂಬಾ ಸರಳ"
●●●●●●●
02. "ಜೀವನದ ಎಲ್ಲಾ ಕ್ಷಣಗಳೂ ನಿಮಗೆ ಸಂತೋಷದಾಯಕ
ಆಗಲಾರದು. ದಿನದ ಎಲ್ಲಾ ಘಟನೆಗಳು ನಿಮಗೆ
ಸಮಧಾನವೆನಿಸಲಾರದು. ಆದರೆ ಒಂದು ಸಂಗತಿ ಮಾತ್ರ
ನಿಮಗೆ ಅತ್ಯಂತ ಖುಷಿಯೆನಿಸುವುದು. ಅದು
ಯಾವುದೆಂದರೆ ಬೇರೆಯವರ ಕಣ್ಣುಗಳಲಿ ನೀವು ಕಾಣುವ
ನಿಮ್ಮ ಬಗೆಗಿನ ಕಾಳಜಿ"
●●●●●●●
03. "ಕಾಲಿಗೆ ಬೂಟುಗಳಿಲ್ಲವೆಂದು ನಾನು ಅಳುತ್ತಿದ್ದೆ. ಆದರೆ
ಕಾಲುಗಳೇ ಇಲ್ಲದ ವ್ಯಕ್ತಿಯನು ಕಂಡಾಗ ನಾನು
ಅಳುವುದನ್ನು ನಿಲ್ಲಿಸಿಬಿಟ್ಟೆ. ಬದುಕು ಆಶೀರ್ವಾದಗಳ
ಸಂತೆ. ನಾವು ಅದನ್ನು ಅರ್ಥ ಮಾಡಿಕೊಳ್ಳಬೇಕು"
●●●●●●●
04. "ಯಾರಾದರೂ ಬಹು ಬೇಗ ಸತ್ತುಹೋದರೆ ದೇವರು
ಅವನನ್ನು ತುಂಬಾ ಪ್ರೀತಿಸುತ್ತಾನೆಂದು ಜನ ಅಭಿಪ್ರಾಯ
ಪಡುತ್ತಾರೆ. ಆದರೆ ಭೂಮಿಯ ಮೇಲೆ ಇನ್ನೂ
ಬದುಕಿದ್ದೇವೆಂದರೆ ಏನರ್ಥ?
ಈ ಭೂಮಿಯ ಮೇಲೆ ಯಾರೋ ದೇವರಿಗಿಂತ ನಮ್ಮನ್ನು
ಹೆಚ್ಚಾಗಿ ಪ್ರೀತಿಸುತ್ತಾರೆ ಎಂದರ್ಥ"
●●●●●●●
05. "ನೋವುಂಡ ಹೃದಯ ಸಣ್ಣ ಮಕ್ಕಳಂತೆ. ಅದು ಅಳಬಹುದೇ
ಹೊರತು ತನ್ನ ಭಾವನೆಗಳನು ಹಂಚಿಕೊಳ್ಳದು .ಆದ್ದರಿಂದ
ನಿಮ್ಮನ್ನು ಪ್ರೀತಿಸುವ ಮತ್ತು ನಿಮ್ಮ ಮೇಲೆ ಕಾಳಜಿ
ತೋರುವ ಯಾರನ್ನು ನೋಯಿಸಬೇಡಿ"...
●●●●●●●
06. "ಒಳ್ಳೆಯ ರಸ್ತೆ ಒಬ್ಬ ಒಳ್ಳೆಯ ಚಾಲಕನನ್ನು ರೂಪಿಸಲಾರದು.
ಶಾಂತವಾಗಿರುವ ಸಾಗರ ಒಬ್ಬ ಒಳ್ಳೆಯ ನಾವಿಕನನು
ರೂಪಿಸಲಾರದು. ತಿಳಿಯಾದ ಆಕಾಶ ಒಬ್ಬ ಒಳ್ಳೆಯ
ವಿಮಾನ ಚಾಲಕನನ್ನು ರೂಪಿಸಲಾರದು. ಸಮಸ್ಯೆಗಳೇ
ಇಲ್ಲದ ಜೀವನ ಎಂದಿಗೂ ಸಾಧಕರನು ರೂಪಿಸದು"
●●●●●●●
07. "ಸಮಯ ನಮಗಾಗಿ ಕಾಯುವುದಿಲ್ಲ ಎಂದಾದರೆ ನಾವೇಕೆ
ಯೋಗ್ಯ ಸಮಯಕ್ಕಾಗಿ ಯಾವಾಗಲೂ ಕಾಯಬೇಕು?
ಒಳ್ಳೆಯ ಕೆಲಸ ಮಾಡುವುದಕೆ ಯಾವಾಗಲೂ ಕೆಟ್ಟ
ಸಮಯ ಎಂದಿರುವದಿಲ್ಲ"
ಯುವರಾಜ ನಂದಿ
●●●●●●