Wednesday, 11 January 2017

ಮನ ಮುಟ್ಟುವ ನುಡಿಮುತ್ತುಗಳು ನನ್ನ ಮನಮುಟ್ಟಿದ ಸಾಲುಗಳು



01. "ಎಲ್ಲಾ ಬೆರಳುಗಳೂ ಒಂದೇ ರೀತಿಯ ಅಳತೆಯನ್ನು
        ಹೊಂದಿಲ್ಲ.ಆದರೆ ಅವು ಬಗ್ಗಿ ನಿಂತರೆ ಎಲ್ಲವೂ ಒಂದೇ
        ಸಮನಾದೀತು. ಬದುಕಿನಲ್ಲೂ ಹಾಗೆ ನಾವು
        ಬಾಗುವುದಾದರೆ ಮತ್ತು ಸನ್ನಿವೇಶಗಳಿಗೆ
        ಹೊಂದಿಕೊಳುವುದಾದರೆ ಬದುಕು ತುಂಬಾ ಸರಳ"
                         ●●●●●●●
02. "ಜೀವನದ ಎಲ್ಲಾ ಕ್ಷಣಗಳೂ ನಿಮಗೆ ಸಂತೋಷದಾಯಕ
        ಆಗಲಾರದು. ದಿನದ ಎಲ್ಲಾ ಘಟನೆಗಳು ನಿಮಗೆ
        ಸಮಧಾನವೆನಿಸಲಾರದು. ಆದರೆ ಒಂದು ಸಂಗತಿ ಮಾತ್ರ
        ನಿಮಗೆ ಅತ್ಯಂತ ಖುಷಿಯೆನಿಸುವುದು. ಅದು
        ಯಾವುದೆಂದರೆ ಬೇರೆಯವರ ಕಣ್ಣುಗಳಲಿ ನೀವು ಕಾಣುವ
        ನಿಮ್ಮ ಬಗೆಗಿನ ಕಾಳಜಿ"
                         ●●●●●●●

03. "ಕಾಲಿಗೆ ಬೂಟುಗಳಿಲ್ಲವೆಂದು ನಾನು ಅಳುತ್ತಿದ್ದೆ. ಆದರೆ
        ಕಾಲುಗಳೇ ಇಲ್ಲದ ವ್ಯಕ್ತಿಯನು ಕಂಡಾಗ ನಾನು
        ಅಳುವುದನ್ನು ನಿಲ್ಲಿಸಿಬಿಟ್ಟೆ. ಬದುಕು ಆಶೀರ್ವಾದಗಳ
         ಸಂತೆ. ನಾವು ಅದನ್ನು ಅರ್ಥ ಮಾಡಿಕೊಳ್ಳಬೇಕು"
                         ●●●●●●●
04. "ಯಾರಾದರೂ ಬಹು ಬೇಗ ಸತ್ತುಹೋದರೆ ದೇವರು
        ಅವನನ್ನು ತುಂಬಾ ಪ್ರೀತಿಸುತ್ತಾನೆಂದು ಜನ ಅಭಿಪ್ರಾಯ
        ಪಡುತ್ತಾರೆ. ಆದರೆ ಭೂಮಿಯ ಮೇಲೆ ಇನ್ನೂ
        ಬದುಕಿದ್ದೇವೆಂದರೆ ಏನರ್ಥ?
        ಈ ಭೂಮಿಯ ಮೇಲೆ ಯಾರೋ ದೇವರಿಗಿಂತ ನಮ್ಮನ್ನು
        ಹೆಚ್ಚಾಗಿ ಪ್ರೀತಿಸುತ್ತಾರೆ ಎಂದರ್ಥ"
                         ●●●●●●●
05. "ನೋವುಂಡ ಹೃದಯ ಸಣ್ಣ ಮಕ್ಕಳಂತೆ. ಅದು ಅಳಬಹುದೇ
        ಹೊರತು ತನ್ನ ಭಾವನೆಗಳನು ಹಂಚಿಕೊಳ್ಳದು .ಆದ್ದರಿಂದ
        ನಿಮ್ಮನ್ನು ಪ್ರೀತಿಸುವ ಮತ್ತು ನಿಮ್ಮ ಮೇಲೆ ಕಾಳಜಿ
        ತೋರುವ ಯಾರನ್ನು ನೋಯಿಸಬೇಡಿ"...
                         ●●●●●●●
06. "ಒಳ್ಳೆಯ ರಸ್ತೆ ಒಬ್ಬ ಒಳ್ಳೆಯ ಚಾಲಕನನ್ನು ರೂಪಿಸಲಾರದು.
        ಶಾಂತವಾಗಿರುವ ಸಾಗರ ಒಬ್ಬ ಒಳ್ಳೆಯ ನಾವಿಕನನು
        ರೂಪಿಸಲಾರದು. ತಿಳಿಯಾದ ಆಕಾಶ ಒಬ್ಬ ಒಳ್ಳೆಯ
        ವಿಮಾನ ಚಾಲಕನನ್ನು ರೂಪಿಸಲಾರದು. ಸಮಸ್ಯೆಗಳೇ
        ಇಲ್ಲದ ಜೀವನ ಎಂದಿಗೂ ಸಾಧಕರನು ರೂಪಿಸದು"
                         ●●●●●●●
07. "ಸಮಯ ನಮಗಾಗಿ ಕಾಯುವುದಿಲ್ಲ ಎಂದಾದರೆ ನಾವೇಕೆ
        ಯೋಗ್ಯ ಸಮಯಕ್ಕಾಗಿ ಯಾವಾಗಲೂ ಕಾಯಬೇಕು?
        ಒಳ್ಳೆಯ ಕೆಲಸ ಮಾಡುವುದಕೆ ಯಾವಾಗಲೂ ಕೆಟ್ಟ
        ಸಮಯ ಎಂದಿರುವದಿಲ್ಲ"

                    ಯುವರಾಜ ನಂದಿ
                      ●●●●●●