ಮದುವೆ ಮೆರವಣಿಗೆಯಲ್ಲಿ ವರ ಹಿಂದಿದ್ದರೆ ಲೋಕವೇ ಅವನ ಮುಂದೆ ಸಾಗುತ್ತದೆ, ಅಂತಿಮ ಯಾತ್ರೆಯಲ್ಲಿ ಶವ ಮುಂದಿದ್ದರೆ ಲೋಕವೇ ಹಿಂದೆ ಸಾಗುತ್ತದೆ,ಅಂದರೆ ಖುಷಿಯಲ್ಲಿ ಮುಂದಿದ್ದರೆ ದುಃಖದಲ್ಲಿ ಹಿಂದಿರುತ್ತಾರೆ.
ಮೇಣದ ಬತ್ತಿ ಹಚ್ಚಿ ತೀರಿ ಹೋದವರ ನೆನೆಯುತ್ತಾರೆ, ಮೇಣದ ಬತ್ತಿ ಆರಿಸಿ ಜನ್ಮದಿನ ಆಚರಿಸುತ್ತಾರೆ.
ವಾಹ್ ಎಂಥ ಪ್ರಪಂಚ!
ಮನೆ ಸುಟ್ಟರೆ ವಿಮಾ ತಗೊಬಹುದು ಕನಸುಗಳು ಸುಟ್ಟರೆ ಏನು ಮಾಡೋಣ?
ಆಕಾಶದಿಂದ ಮಳೆ ಸುರಿದರೆ ಛತ್ರಿ ಹಿಡಿಬಹುದು ಕಣ್ಣಿಂದ ಹನಿ ಸುರಿದರೆ ಏನು ಮಾಡೋಣ?
ಸಿಂಹ ಘರ್ಜಿಸಿದರೆ ಓಡಿಹೋಗಬಹುದು ಅಹಂಕಾರ ಘರ್ಜಿಸಿದರೆ ಏನು ಮಾಡೋಣ?
ಮುಳ್ಳು ಚುಚ್ಚಿದರೆ ತಗೆಯಬಹುದು ಯಾವುದೋ ಮಾತು ಚುಚ್ಚಿದರೆ ಏನು ಮಾಡೋಣ?
ನೋವು ಆದರೆ ಔಷಧಿ ತೊಗೊಬಹುದು ವೇದನೆ ಆದರೆ ಏನು ಮಾಡೋಣ?
ಒಬ್ಬ ಒಳ್ಳೆಯ ಮಿತ್ರ ಒಂದೊಳ್ಳೆ ಔಷಧೀಯ ಹಾಗೆ ಆದರೆ ಒಂದೊಳ್ಳೆ ಗೆಳೆಯರ ಬಳಗ ಒಂದು ಪೂರ್ತಿ ಔಷಧ ಅಂಗಡಿ ಇದ್ದ ಹಾಗೆ.
ಗೆಳೆಯರನ್ನ ಗೆಳೆತನವನ್ನ ಬೆಳೆಸಿ ಪ್ರೀತಿಸಿ ಹಾಗೂ ಹರಸಿ ಯಲ್ಲಪ್ಪ ನಂದಿ
