ಧವಳ ಹಿಮದ ಗಿರಿಯ ಮೇಲೆ ಅರುಣ ಧ್ವಜವ ಹಾರಿಸಿ
ಧವಳ ಹಿಮದ ಗಿರಿಯ ಮೇಲೆ ಅರುಣ ಧ್ವಜವ ಹಾರಿಸಿ
ಮುಗಿಲ ಏಣಿ ಏರಿ ನಿಂದು ವಿಜಯಭೇರಿ ಬಾರಿಸಿ ||ಪ||
ಸಿಂಧು ಕಣಿವೆಯೊಡಲಿನಿಂದ ವೀರಗಾನ ಮೊಳಗಲಿ
ಧ್ಯೇಯರವಿಯ ಕಿರಣ ತರುಣರೆದೆಯ ಗುಡಿಯ ಬೆಳಗಲಿ
ಎದ್ದು ನಿಲ್ಲು ಭಾರತ... ದಿವ್ಯಪ್ರಭೆಯ ಬೀರುತ ||೧||
ಮನವ ಹಸಿರುಗೊಳಿಸುತಿಹಳು ಭಾವಗಂಗೆ ಅನುದಿನ
ಇಳೆಯ ಕೊಳೆಯ ತೊಳೆಯುತಿಹಳು ತಾಯಿ ತುಂಗೆ ಕ್ಷಣಕ್ಷಣ
ನೆಲವಿದೆಮ್ಮ ಪಾವನ... ಎನಿತು ಧನ್ಯ ಜೀವನ ||೨||
ನಾಡಗುಡಿಯ ಮೂರು ಕಡೆಯು ಪೊರೆವ ಶಾಂತ ಸಾಗರ
ಹಿಂದು ಜನರ ಹೃದಯವಿಂದು ಕ್ಷಾತ್ರತೇಜದಾಗರ
ಸ್ಫೂರ್ತಿ ಗೌರಿಶಂಕರ... ಕಾಲಯಮನು ಕಿಂಕರ ||೩||
ಅಸುರತನದ ಉಸಿರ ನೀಗಿ ಭೇದಭಾವ ನೀಗುತ
ಸಾಗು ಮುಂದೆ ಮುಂದೆ ಸಾಗು ಮಾತೆಯನ್ನು ಸ್ಮರಿಸುತ
ನಿನಗೆ ಜಯದ ಆರತಿ... ಹರಸು ತಾಯೆ ಭಾರತಿ ||೪||
ಧವಳ ಹಿಮದ ಗಿರಿಯ ಮೇಲೆ ಅರುಣ ಧ್ವಜವ ಹಾರಿಸಿ
ಮುಗಿಲ ಏಣಿ ಏರಿ ನಿಂದು ವಿಜಯಭೇರಿ ಬಾರಿಸಿ ||ಪ||
ಸಿಂಧು ಕಣಿವೆಯೊಡಲಿನಿಂದ ವೀರಗಾನ ಮೊಳಗಲಿ
ಧ್ಯೇಯರವಿಯ ಕಿರಣ ತರುಣರೆದೆಯ ಗುಡಿಯ ಬೆಳಗಲಿ
ಎದ್ದು ನಿಲ್ಲು ಭಾರತ... ದಿವ್ಯಪ್ರಭೆಯ ಬೀರುತ ||೧||
ಮನವ ಹಸಿರುಗೊಳಿಸುತಿಹಳು ಭಾವಗಂಗೆ ಅನುದಿನ
ಇಳೆಯ ಕೊಳೆಯ ತೊಳೆಯುತಿಹಳು ತಾಯಿ ತುಂಗೆ ಕ್ಷಣಕ್ಷಣ
ನೆಲವಿದೆಮ್ಮ ಪಾವನ... ಎನಿತು ಧನ್ಯ ಜೀವನ ||೨||
ನಾಡಗುಡಿಯ ಮೂರು ಕಡೆಯು ಪೊರೆವ ಶಾಂತ ಸಾಗರ
ಹಿಂದು ಜನರ ಹೃದಯವಿಂದು ಕ್ಷಾತ್ರತೇಜದಾಗರ
ಸ್ಫೂರ್ತಿ ಗೌರಿಶಂಕರ... ಕಾಲಯಮನು ಕಿಂಕರ ||೩||
ಅಸುರತನದ ಉಸಿರ ನೀಗಿ ಭೇದಭಾವ ನೀಗುತ
ಸಾಗು ಮುಂದೆ ಮುಂದೆ ಸಾಗು ಮಾತೆಯನ್ನು ಸ್ಮರಿಸುತ
ನಿನಗೆ ಜಯದ ಆರತಿ... ಹರಸು ತಾಯೆ ಭಾರತಿ ||೪||