Monday, 23 December 2019

ಅಹಂಕಾರ ಎಂದರೇನು?


ಅಹಂ ಎಂದರೆ ಜೀವದ ಸ್ವಕೃತ ಧರ್ಮ. ‘ಸ್ವಕೃತ’ ಎಂಬ ಶಬ್ದವನ್ನು ‘ಸ್ವ’ದ ಅರಿವಿನಿಂದ, ಅಂದರೆ ತನ್ನತನದ ಅರಿವಿನಿಂದ ಜೀವವು ಸ್ವೀಕರಿಸಿದ ಕೃತಿಸ್ವರೂಪ ಕರ್ಮ ಎಂಬ ಅರ್ಥದಲ್ಲಿ ಉಪಯೋಗಿಸಲಾಗಿದೆ.


‘ನಾನು ಹೋದರೆ ಹೋದೇನು’ ಎಂದು ಹೇಳಿದ ಕನಕದಾಸರ ಈ ಪ್ರಸಿದ್ಧ ಉಕ್ತಿಯಿಂದ ಮನುಷ್ಯನಲ್ಲಿನ ‘ನನ್ನತನ’ದ, ಅಂದರೆ ಅಹಂಭಾವದ ವ್ಯರ್ಥತೆಯು ತಿಳಿಯುತ್ತದೆ. ಅಹಂಭಾವವು ಮನುಷ್ಯನ ಲೌಕಿಕ ಮತ್ತು ಪಾರಮಾರ್ಥಿಕ ಸುಖದಲ್ಲಿನ ಒಂದು ದೊಡ್ಡ ಅಡಚಣೆಯಾಗಿದೆ. ಅಹಂಭಾವದ ಬೀಜವು ಮನುಷ್ಯ ಜನ್ಮದಲ್ಲಿಯೇ ಇರುವುದರಿಂದ ಹಿರಿಯ-ಕಿರಿಯ, ಬಡವ-ಬಲ್ಲಿಗ, ಅಶಿಕ್ಷಿತ-ಸುಶಿಕ್ಷಿತ ಇತ್ಯಾದಿ ಎಲ್ಲರಲ್ಲಿಯೂ ಹೆಚ್ಚು ಕಡಿಮೆ ಪ್ರಮಾಣದಲ್ಲಿ ಅಹಂಭಾವವು ಇದ್ದೇ ಇರುತ್ತದೆ.


ಅಹಂಭಾವವು ಹೊಲದಲ್ಲಿ ಬೆಳೆಯುವ ಹುಲ್ಲಿನಂತಿರುತ್ತದೆ. ಎಲ್ಲಿಯವರೆಗೆ ನಾವು ಆ ಹುಲ್ಲನ್ನು ಬೇರುಸಮೇತ ನಾಶಮಾಡುವುದಿಲ್ಲವೋ, ಅಲ್ಲಿಯವರೆಗೆ ಒಳ್ಳೆಯ ಬೆಳೆ ಬರುವುದಿಲ್ಲ. ಆ ಹುಲ್ಲನ್ನು ನಮಗೆ ಸತತವಾಗಿ ನಾಶಮಾಡುತ್ತಲೇ ಇರಬೇಕಾಗುತ್ತದೆ; ಅದರಂತೆಯೇ ಅಹಂಭಾವವು ಸಂಪೂರ್ಣ ನಾಶವಾಗದ ಹೊರತು ಪರಮೇಶ್ವರನ ಕೃಪೆಯ ಬೆಳೆಯು ಬರಲು ಸಾಧ್ಯವಿಲ್ಲ. ಸಾಧನೆಯ ಉದ್ದೇಶವೇ ಅಹಂಭಾವವನ್ನು ನಾಶ ಮಾಡುವುದಾಗಿದೆ; ಆದರೂ ಮನುಷ್ಯನಲ್ಲಿ ಅಹಂಭಾವವು ಎಷ್ಟು ಬೇರೂರಿರುತ್ತದೆ ಎಂದರೆ ಸಾಧನೆಯನ್ನು ಮಾಡು ವಾಗಲೂ ಅದನ್ನು ಸಂಪೂರ್ಣ ನಾಶಮಾಡಲು ಸಹಜ ಸಾಧ್ಯವಾಗುವುದಿಲ್ಲ; ಆದುದರಿಂದ ಸಾಧನೆಯಿಂದ ಅಹಂಭಾವವು ತಾನಾಗಿಯೇ ಕಡಿಮೆಯಾಗುವುದು ಎಂದು ವಿಚಾರವನ್ನು ಮಾಡದೇ ಅಹಂಭಾವವನ್ನು ಕಡಿಮೆ ಮಾಡಿಕೊಳ್ಳಲು ಸತತವಾಗಿ ಪ್ರಯತ್ನ ಮಾಡಬೇಕು.


೧. ‘ಅಹಂ’ ಶಬ್ದದ ವ್ಯಾಖ್ಯೆ ಮತ್ತು ಅರ್ಥ


ಅ. ಸ್ಥೂಲದೇಹದಿಂದಾಗಿ ಅಥವಾ ಲಿಂಗದೇಹದಲ್ಲಿನ ವಿವಿಧ ಸಂಸ್ಕಾರ ಕೇಂದ್ರಗಳಲ್ಲಿನ ಸಂಸ್ಕಾರಗಳಿಂದಾಗಿ ತನ್ನನ್ನು ತಾನು ಇತರರಿಂದ ಮತ್ತು ಈಶ್ವರನಿಂದ ಬೇರೆ ಎಂದು ಪರಿಗಣಿಸುವುದು ಎಂದರೆ ಅಹಂ.

ಆ. ನಾನು, ನನ್ನದು, ನನಗೆ, ಇಂತಹ ಅಭಿಮಾನವನ್ನಿಟ್ಟುಕೊಳ್ಳುವುದು ಎಂದರೆ ಅಹಂ. ನನ್ನ ದೇಹ, ನನ್ನ ಮನಸ್ಸು, ನನ್ನ ಪ್ರಾಣ, ನನ್ನ ಬುದ್ಧಿ, ನನ್ನ ಸಂಪತ್ತು, ನನ್ನ ಹೆಂಡತಿ- ಮಕ್ಕಳು, ನನಗೆ ಸುಖ ಸಿಗಬೇಕು ಎಂಬ ವಿಚಾರಗಳು ಅಹಂನಿಂದಲೇ ನಿರ್ಮಾಣವಾಗುತ್ತವೆ. ಈರುಳ್ಳಿಯ ಸಿಪ್ಪೆಯನ್ನು ಸುಲಿದರೆ ಸಿಪ್ಪೆಯೇ ಸಿಗುತ್ತದೆ ಹೊರತು, ಯಾವ ಸಾರವೂ ಕೈಗೆ ಸಿಗುವುದಿಲ್ಲ, ಹಾಗೆಯೇ ವಿಚಾರ ಮಾಡಿದಾಗ ‘ನಾನು’ ಎನ್ನುವ ವಸ್ತುವೇ ಸಿಗಲಾರದು. ಕೊನೆಗೆ ಏನು ಉಳಿಯುತ್ತದೆಯೋ ಅದೇ ಆತ್ಮ-ಚೈತನ್ಯ.

೨. ಅಹಂಭಾವದ ವಿಧಗಳು


೨ ಅ. ಈಶ್ವರನ ಅಹಂ


ಅಹಂಕಾರ ಈ ಶಬ್ದವು ಅಹಂ + ಆಕಾರ ಹೀಗೆ ರೂಪುಗೊಂಡಿದೆ. ಆಕಾರವು ಹೋಯಿತೆಂದರೆ ಅಹಂ ಮಾತ್ರ ಉಳಿಯುತ್ತದೆ. ಆಗ ‘ನೀನು’ ಇಲ್ಲದಿರುವಂತಹ ‘ನಾನು’ ಉಳಿಯುತ್ತದೆ, ಅರ್ಥಾತ್ ಬ್ರಹ್ಮ ಅಥವಾ ಈಶ್ವರ ಮಾತ್ರ ಉಳಿಯುತ್ತಾನೆ. ಅಹಂರಹಿತ ‘ನಾನು’ ಎಂದರೆ ಬ್ರಹ್ಮ ಅಥವಾ ಈಶ್ವರ.


೨ ಆ. ಮನುಷ್ಯನ ಅಹಂ


೨ ಆ ೧. ಶುದ್ಧ ಅಹಂ : ಇದು ಮುಂದಿನಂತಿರುತ್ತದೆ.


ಅ. ಬ್ರಹ್ಮನಿಂದ ತನ್ನನ್ನು ಬೇರೆ ಎಂದು ತಿಳಿಯುವುದು, ಅಂದರೆ ದ್ವೈತದಲ್ಲಿದ್ದು ಸ್ವಸ್ವರೂಪದ ಅರಿವಿರುವುದು


ಆ. ಅಸ್ತಿತ್ವದ ಅರಿವು ಮಾತ್ರ ಇರುವುದು


ಇ. ‘ನಾನು ಇತರರವನಾಗಿದ್ದೇನೆ ಮತ್ತು ಎಲ್ಲರೂ ನನ್ನವರಾಗಿದ್ದಾರೆ’ ಎನ್ನುವ ಭಾವವಿರುವುದು. ದೇಹ ಇರುವವರೆಗೆ ಜಾಗೃತಾವಸ್ಥೆಯಲ್ಲಿ ಶುದ್ಧ ಅಹಂ ಇದ್ದೇ ಇರುತ್ತದೆ.೨ ಆ ೨. ಅಶುದ್ಧ ಅಹಂ : ‘ಮನಸ್ಸು, ಚಿತ್ತ, ಬುದ್ಧಿ ಮತ್ತು ಅಹಂ ನಿರ್ಮಾಣವಾಗಿ, ಆ ಉತ್ಪತ್ತಿಯ ಪರಮಾವಧಿ ಆಯಿತೆಂದರೆ ಅಂತಃಕರಣವು ಸಂಪೂರ್ಣವಾಗಿ ಜನ್ಮಕ್ಕೆ ಬಂದಿದೆ ಎಂದು ತಿಳಿಯಬೇಕು. ಐಹಿಕ ಸುಖದ ಎಲ್ಲ ಕ್ರಿಯೆಗಳೂ ಅಹಂನ ಆಧಾರದಿಂದಲೇ ನಡೆಯುತ್ತವೆ. ಕಲಿಯುಗದಲ್ಲಿನ ಬುದ್ಧಿ ಮತ್ತು ಅಹಂ ಇವುಗಳ ಬಗ್ಗೆ ಹೀಗೆ ಹೇಳಬಹುದು – ಬುದ್ಧಿಯ ಪರಿಪೂರ್ಣ ವಿಕಾಸ ಎಂದರೆ ದೇಹಬುದ್ಧಿ. ದೇಹಸುಖ ಪಡೆಯಲು ಬುದ್ಧಿವಂತಿಕೆಯ ಗರಿಷ್ಠ ಮಿತಿ ಎಂದರೆ ಬುದ್ಧಿ ! ಅಹಂ ಎಂದರೆ ಬುದ್ಧಿಯ ಪರಿಪೂರ್ಣ ವಿಕಾಸ !’



೨ ಆ ೨ ಅಶುದ್ಧ ಅಹಂ : ಅಶುದ್ಧ ಅಹಂ ಎಂದರೆ ದೇಹದಿಂದಾಗಿ ಅಥವಾ ಲಿಂಗದೇಹದಲ್ಲಿನ ಸ್ವಭಾವ, ವಾಸನೆ, ಇಷ್ಟಾನಿಷ್ಟ ಮುಂತಾದ ಸಂಸ್ಕಾರಕೇಂದ್ರಗಳಲ್ಲಿನ ಸಂಸ್ಕಾರಗಳಿಂದಾಗಿ ತನ್ನ ಅಸ್ತಿತ್ವದ ಅರಿವಿರುವುದು. ವಿಚಾರಗಳು ಹಾಗೂ ಭಾವನೆಗಳಿಗನುಸಾರವಾಗಿ ಅಹಂಭಾವವು ಸಾತ್ತ್ವಿಕ, ರಾಜಸಿಕ ಅಥವಾ ತಾಮಸಿಕವಾಗಿರುತ್ತದೆ. ಅಹಂಭಾವದ ಈ ಮೂರು ವಿಧಗಳನ್ನು ‘ಅಹಂತ್ರಯ’ ಅಥವಾ ‘ತ್ರಿವಿಧ ಅಹಂ’ ಎನ್ನುತ್ತಾರೆ.


೨ ಆ ೨ ಅ. ತಾಮಸಿಕ ಅಹಂ : ತಮೋಗುಣ ಪ್ರಧಾನವಾಗಿರುವಂತಹ ಅಹಂಭಾವವನ್ನು ‘ಭೂತಾದಿ’ ಅಥವಾ ‘ತಾಮಸಿಕ ಅಹಂ’ ಎನ್ನುತ್ತಾರೆ. ಉದಾ. ಕೇವಲ ಸ್ವಕರ್ತೃತ್ವವನ್ನು ಮಾತ್ರ ಒಪ್ಪಿಕೊಳ್ಳುವುದು.


೨ ಆ ೨ ಆ. ರಾಜಸಿಕ ಅಹಂ : ರಜೋಗುಣದ ಪ್ರಾಬಲ್ಯವಿರುವಂತಹ ಅಹಂಭಾವವನ್ನು ‘ತೈಜಸ’ ಅಥವಾ ‘ರಾಜಸಿಕ ಅಹಂಭಾವ’ ಎನ್ನುತ್ತಾರೆ. ಉದಾ. ಸದಾಕಾಲ ಸುಖಕ್ಕಾಗಿ ಚಡಪಡಿಸುವುದು.


೩ ಆ ೨ ಇ. ಸಾತ್ತ್ವಿಕ ಅಹಂ : ಸತ್ತ್ವಗುಣ ಪ್ರಧಾನವಾಗಿರುವಂತಹ ಅಹಂಭಾವವನ್ನು ‘ವೈಕೃತ’ ಅಥವಾ ‘ಸಾತ್ತ್ವಿಕ ಅಹಂ’ ಎನ್ನುತ್ತಾರೆ. ಉದಾ. ತ್ಯಾಗದ ಅಹಂ ಸಾತ್ತ್ವಿಕವಾಗಿರುತ್ತದೆ.


(ಆಧಾರ : ಸನಾತನ ನಿರ್ಮಿತ ‘ಅಹಂ ನಿರ್ಮೂಲನೆಗಾಗಿ ಸಾಧನೆ’ ಗ್ರಂಥ)


ಯಲ್ಲಪ್ಪ ನಂದಿ 

Tuesday, 22 October 2019

ಕಿತ್ತೂರು ರಾಣಿ ಚೆನ್ನಮ್ಮ ಹುಟ್ಟು ಹಬ್ಬದ ಶುಭಾಷಯಗಳು.



ದಿನಾಂಕ 23-10-19  ರಂದು ವೀರ ಮಹಿಳೆ ಕಿತ್ತೂರು ರಾಣಿ ಚೆನ್ನಮ್ಮ ಜಯಂತ್ಯೋತ್ಸವ ನಿಮಿತ್ತ ಈ ವಿಶೇಷ ಲೇಖನ.

ಅಪ್ರತಿಮ ದೇಶ ಭಕ್ತೆ, ಕೆಚ್ಚೆದೆಯ ಹೋರಾಟಗಾರ್ತಿಯಾಗಿದ್ದ ಚೆನ್ನಮ್ಮಳ ಸ್ವಾತಂತ್ರ್ಯ ಪ್ರೇಮ, ಅದಕ್ಕಾಗಿ ಆಕೆ ನಡೆಸಿದ ಹೋರಾಟ, ಆಕೆಯ ಬದುಕಿನ ಸಾರ್ಥಕ ಪುಟಗಳ ಒಂದು ಪುಟ್ಟ ಅವಲೋಕನ ಇದು, ನಿಮಗಾಗಿ...

ನಮಸ್ಕಾರ ಸ್ನೇಹಿತರೇ,

ನಮ್ಮ ಕನ್ನಡ ನಾಡು ಹಿಂದಿನಿಂದಲೂ ಸಾಕಷ್ಟು ವೀರರೂ ಶೂರರೂ ಇದ್ದಂತಹಾ ನಾಡು ಅದರಲ್ಲಿಯೂ ಉತ್ತರ ಕರ್ನಾಟಕದ ಭಾಗವು ಗಂಡುಗಲಿಗಳ ನಾಡೆಂದೇ ಪ್ರಸಿದ್ದಿಯನ್ನು ಹೊಂದಿದೆ. ಅಂತಹುದರಲ್ಲಿ ಬೆಳಗಾವಿಯಲ್ಲಿನ ಕಿತ್ತೂರು ಸಂಸ್ಥಾನವನ್ನಾಳಿದ ವೀರ ಮಹಿಳೆ ಚೆನ್ನಮ್ಮಾಜಿಯೂ ಒಬ್ಬಳು. ಇಡೀ ದೇಶವನ್ನು ಆಕ್ರಮಿಸಿಕೊಂಡಿದ್ದ ಬ್ರಿಟೀಷರನ್ನು ಗಡ ಗಡನೆ ನಡುಗುವಂತೆ ಮಾಡಿದ್ದಲ್ಲದೆ ತಾನೊಬ್ಬಳೇ ಏಕಾಂಗಿಯಾಗಿ ಅವರ ವಿರುದ್ದ ಹೋರಾಡಿ ಕನ್ನಡಿಗರ ಕೆಚ್ಚೆದೆಯ ಹೋರಾಟಕ್ಕೆ ಸಾಕ್ಷಿಯಾದವಳು. (ಫೆಬ್ರವರಿ 2 ರಂದು ರಾಣಿ ಚೆನ್ನಮ್ಮಳ ಸ್ಮೃತಿ ದಿನವನ್ನಾಗಿ ಕೂಡ ಆಚರಿಸಲಾಗುತ್ತಿದೆ)

ಬೆಳಗಾವಿ ಜಿಲ್ಲೆಯ ಕಿತ್ತೂರು ಇಂದು ರಾಣಿ ಚೆನ್ನಮ್ಮನಿಂದಾಗಿ ವಿಶ್ವ ವಿಖ್ಯಾತವಾಗಿದೆ. ಈ ಕಿತ್ತೂರನ್ನು ಆಳಿದ ದೇಸಾಯಿಗಳಲ್ಲಿ ಅತ್ಯಂತ ಪ್ರಮುಖರಾದ ಮಲ್ಲಸರ್ಜ ದೇಸಾಯಿಯವರ ಎರಡನೇ ಪತ್ನಿಯಾಗಿದ್ದ ವೀರ ರಾಣಿ ಚೆನ್ನಮ್ಮ ತನ್ನ ಪುಟ್ಟ ರಾಜ್ಯ ಕಿತ್ತೂರಿನ ರಕ್ಷಣೆಗಾಗಿ ಬಹುತೇಕ ಭಾರತವನ್ನೇ ಆಕ್ರಮಿಸಿಕೊಂಡಿದ್ದ ಪ್ರಬಲರಾದ ಬ್ರಿಟೀಷರ ವಿರುದ್ದ ಸೆಟೆದು ನಿಂತವಳು. ತಾನೊಬ್ಬಳೇ ಏಕಾಂಗಿಯಾಗಿ ಹೋರಾಡಿದ ಈ ಧೀರ ಮಹಿಳೆಯ ಕಥೆ ಎಂಥವರಿಗೂ ಸ್ಪೂರ್ತಿದಾಯಕವಾಗಬಲ್ಲುದು.

ರಾಣಿ ಚೆನ್ನಮ್ಮ ಹುಟ್ಟಿದ್ದು ಬೆಳಗಾವಿ ನಗರದಿಂದ ಆರು ಕಿಲೋಮೀತರ್ ದೂರದಲ್ಲಿರುವ ಕಾಕತಿ ಎಂಬ ಪುಟ್ಟ ಗ್ರಾಮದಲ್ಲಿ. ೧೭೭೮ರಲ್ಲಿ ಹುಟ್ಟಿದ ಚೆನ್ನಮ್ಮಳ ತಂದೆ ಕಾಕತಿಯ ದೇಸಾಯಿಯಾಗಿದ್ದ ಧೂಳಪ್ಪಗೌಡರು. ಚೆನ್ನಮ್ಮ ತಾನು ಚಿಕ್ಕ ವಯಸ್ಸಿನಲ್ಲಿಯೇ ಕುದುರೆ ಸವಾರಿ, ಬಿಲ್ಲು ವಿದ್ಯೆಯಲ್ಲಿ ಪರಿಣಿತಿಯನ್ನು ಪಡೆದಿದ್ದಳು. ಚಿಕ್ಕಂದಿನಿಂದಲೂ ಅಂಜಿಕೆ ಯಿರದ ಧೈರ್ಯವಂತೆಯಾಗಿದ್ದ ಚೆನ್ನಮ್ಮಳು ತಾನು ಎಂತಹಾ ಕಷ್ಟದ ಪರಿಸ್ಥಿತಿಯನ್ನೂ ಎದುರಿಸಬಲ್ಲವಳಾಗಿದ್ದಳು. ಹೀಗಾಗಿಯೇ ಮುಂದೆ ತನ್ನ ರಾಜ್ಯಕ್ಕೆದುರಾದ ಕಠಿಣ ಪರಿಸ್ಥಿತಿಯಲ್ಲಿಯೂ ತಾನು ಒಂದಿನಿತೂ ಅಳುಕದೆ ರಾಜನಿಷ್ಠರಾಗಿದ್ದ ಗುರುಸಿದ್ದಪ್ಪ, ನರಸಿಂಗರಾವ್ ಮತ್ತಿತರರ ಬೆಂಬಲದೊಡನೆ ತನ್ನ ದತ್ತು ಮೊಮ್ಮಗನಿಗೆ ಪಟ್ಟಕಟ್ಟಿದ್ದಳು.

ಬಿಜಾಪುರ ಸುಲ್ತಾನರ ಪತನದ ಬಳಿಕ ಉತ್ತರ ಕರ್ನಾಟಕದಾದ್ಯಂತ ಒಂದು ಬಗೆಯ ಅರಾಜಕತೆಯುಂಟಾಗುತ್ತದೆ. ದಕ್ಷಿಣದ ಮೈಸೂರನ್ನಾಳುತ್ತಿದ್ದ ಒಡೆಯರ್ ರನ್ನು ಮೂಲೆಗುಂಪು ಮಾಡಿ ರಾಜ್ಯದ ಆಡಳಿತವನ್ನೆಲ್ಲಾ ತಮ್ಮ ಕೈಗೆ ತೆಗೆದುಕೊಂಡಿದ್ದ ಹೈದರ್ ಹಾಗೂ ಟಿಪ್ಪು ಸುಲ್ತಾನರುಗಳು ಉತ್ತರದಲ್ಲಿನ ಆ ಅರಾಜಕತೆಯ ಲಾಭವನ್ನು ಪಡೆಯಲು ಹವಣಿಸುತ್ತಿದ್ದರೆ ಇನ್ನೊಂದು ಕಡೆ ಮರಾಠಾ ಪೇಶ್ವೆಗಳು ಸಹ ತಮಗೆ ಎಲ್ಲಾದರೂ ಅವಕಶ ದಕ್ಕೀತೆಂದು ಕಾಯುತ್ತಿರುತ್ತಾರೆ. ಇನ್ನೊಂದು ಕಡೆ ಭಾರತೀಯ ರಾಜರುಗಳ ಈ ಒಳಜಗಳ, ಅದರಿಂದುಂಟಾದ ಅರಾಜಕತೆ ಇವು ಬ್ರಿಟೀಷರು ಭಾರತದಲ್ಲಿ ತಮ್ಮ ಭದ್ರ ನೆಲೆಯನ್ನು ಕಂಡುಕೊಳ್ಳಲು ಸಹಕಾರಿಯಾದವು.

ಪರಿಸ್ಥಿತಿ ಹೀಗಿರಲು ಟಿಪ್ಪು ಸುಲ್ತಾನನು ಕಿತ್ತೂರಿನ ದೊರೆ ಮಲ್ಲಸರ್ಜನನ್ನು ಬಂಧಿಸಿ ಕಪಾಲದುರ್ಗ ಎನ್ನುವಲ್ಲಿ ಸೆರೆಯಿಟ್ಟಿದ್ದನು. ಅವನ ಸೆರೆವಾಸದಿಂದ ತಪ್ಪಿಸಿಕೊಂಡ ದೊರೆ ಮಲ್ಲಸರ್ಜನು 1803 ರಲ್ಲಿ ಅಂದಿನ ಬ್ರಿಟೀಷ್ ಗವರ್ನರ್ ಲಾರ್ಡ್ ವೆಲ್ಲಸ್ಲಿ ಗೆ ನೆರವು ನೀಡುವ ಮೂಲಕ ಕಿತ್ತೂರು ಸಂಥಾನವನ್ನು ಭದ್ರಗೊಳಿಸಿದ್ದನು. 1809 ರಲ್ಲಿ ಮರಾಠ ಪೇಶ್ವೆಯವರಿಗೂ ನೆರವಾಗಿ ಅವರಿಂದ ಸನ್ನದನ್ನು ಹೊಂದಿದ್ದನು. ಆದರೆ ಪೇಶ್ವೆಗಳು ತಾವು ಸಹ ಮಲ್ಲಸರ್ಜನಿಗೆ ವಿಶ್ವಾಸ ದ್ರೋಹವೆಸಗಿ ಅವನನ್ನು ಬಂಧಿಸಿ ಮೂರು ವರ್ಷಗಳ ಕಾಲ ಪೂನಾದ ಜೈಲಿನಲ್ಲಿಟ್ತರು. ಇದಾಗಿ 1816 ರಲ್ಲಿ ಅಲ್ಲಿಂದ ಬಿಡುಗಡೆಯಾಗಿ ಕಿತ್ತೂರಿಗೆ ಮರಳುತ್ತಿರುವಾಗ ಮಾರ್ಗಮಧ್ಯದಲ್ಲಿಯೇ ಮಲ್ಲಸರ್ಜನು ಕೊನೆಯುಸಿರೆಳೆದನು.

ಇವನ ಬಳಿಕ ಅಧಿಕಾರವನ್ನು ವಹಿಸಿಕೊಂಡಿದ್ದ ಶಿವಲಿಂಗರುದ್ರಸರ್ಜನು ತಾನು ಬ್ರಿಟೀಷರೊಡನೆ ಸ್ನೇಹದಿಂದಿದ್ದನು. ಈ ಒಂದು ಸ್ನೇಹದ ಕುರುಹಾಗಿ ಪ್ರತಿ ವರ್ಷ ಒಂದು ಲಕ್ಷದ ಎಪ್ಪತ್ತು ಸಾವಿರ(1,70,000) ರೂಪಾಯಿ ಬ್ರಿಟೀಷರ ಕೈಸೇರಿರುತ್ತಿತ್ತು! ಶಿವಲಿಂಗರುದ್ರಸರ್ಜನು ತಾನು 11 ಸೆಪ್ಟೆಂಬರ್ 1824 ರಂದು ತನ್ನ ರಾಜ್ಯಕ್ಕೆ ವಾರಸುದಾರರಿಲ್ಲದೆ ತೀರಿಕೊಂಡನು. ಶಿವಲಿಂಗರುದ್ರಸರ್ಜನು ತಾನು ಸಾಯುವ ಸಮಯದಲ್ಲಿ ಆತನ ಮಡದಿಗೆ ಕೇವಲ 11 ವರ್ಷ! ಶಿವಲಿಂಗ ಮಲ್ಲಸರ್ಜನು ತಾನು ಮರಣ ಹೊಂದುವ ಮುನ್ನ ಮಾಸ್ತವರಡಿ ಗೌದರ ಪುತ್ರ ಶಿವಲಿಂಗಪ್ಪನನ್ನು ದತ್ತು ಪಡೆದಿರುತ್ತಾನೆ. ಆದರೆ ಅಂದಿನ ಬ್ರಿಟೀಷರ ಕಂಪನಿ ಸರ್ಕಾರ ಈ ದತ್ತು ಪುತ್ರನು ರಾಜ್ಯದ ಒಡೆಯನಾಗಲು ಸರ್ವಥಾ ನಿರಾಕರಿಸುತ್ತದೆ. ಆ ಸಮಯದಲ್ಲಿ ಧಾರವಾಡ ಸೀಮೆಯ ಕಲೆಕ್ಟರ್ ಆಗಿದ್ದ ಥ್ಯಾಕರೆಯು ತಾನು ಸ್ವತಃ ಕಿತ್ತೂರಿಗೆ ಭೇಟಿ ನೀಡಿ ಕಂಪನಿ ಸರ್ಕಾರದಿಂದ ಮುಂದಿನ ಆದೇಶ ಬರುವವರೆಗೆ ತಾತ್ಕಾಲಿಕವಾಗಿ ಮಲ್ಲಪ್ಪಶೆಟ್ಟಿ ಹಾಗು ಹಾವೇರಿ ವೆಂಕಟರಾವ ಇವರನ್ನು ಸಂಸ್ಥಾನದ ವ್ಯವಹಾರ ನಿರ್ವಹಿಸಲು ನೇಮಕ ಮಾಡುತ್ತಾನೆ ಹಾಗು ಕಿತ್ತೂರಿನ ಭಂಡಾರಕ್ಕೆ ಬೀಗ ಮುದ್ರೆ ಹಾಕುತ್ತಾನೆ.

ಕಿತ್ತೂರಿನ್ನು ಬ್ರಿಟೀಷರ ಆಕ್ರಮಣಗಳಿಂದ ರಕ್ಶಿಸಲು ಚೆನ್ನಮ್ಮ ಸಾಕಷ್ಟು ಪ್ರಯತ್ನ ಪಡುತ್ತಾಳೆ. ಮೊದಲು ಬ್ರಿಟೀಷ್ ಅಧಿಕಾರಿಗಳಾಗಿದ್ದ ಥ್ಯಾಕರೆ, ಮನ್ರೋ, ಚಾಪ್ಲಿನ್ ರವರುಗಳಿಗೆ ಸಂಧಾನ ಮಾಡಿಕೊಳ್ಳುವ ಸಲುವಾಗಿ ಪತ್ರ ಬರೆಯುತ್ತಾಳೆ. ಆದರೆ ಬ್ರಿಟೀಷರು ಅದಾಗಲೇ ಕಿತ್ತೂರನ್ನು ವಶಪಡಿಸಿಕೊಂಡೇ ಸಿದ್ದ ಎಂಬ ತೀರ್ಮಾನಕ್ಕೆ ಬಂದಾಗಿರುತ್ತದೆ. ಇದನ್ನರಿತ ಚೆನ್ನಮ್ಮನು ತಾನು ಹಠ ಬಿಡದೆ ನೆರೆ ರಾಜ್ಯದ ರಾಜರುಗಳ ಸಹಕಾರ ಕೋರಿ ಅವರಿಗೂ ಓಲೆ ಕಳುಹಿಸುತ್ತಾಳೆ. ಆದರೆ ಯಾರಿಂದಲೂ ತಕ್ಕ ಸಮಯಕ್ಕೆ ಸಹಕಾರ ದೊರೆಯದೆ ಹೋಗುತ್ತದೆ.

21 ಅಕ್ಟೋಬರ್ 1824 ಕ್ಕೆ ಥ್ಯಾಕರೆ ಕಿತ್ತೂರಿಗೆ ತಾನು ಸೈನ್ಯ ಸನ್ನದ್ದನಾಗಿ ಆಗಮಿಸುತ್ತಾನೆ. 23 ಅಕ್ಟೋಬರ್ 1824 ರಂದು ಥ್ಯಾಕರೆ ಅಧಿಕೃತವಾಗಿ ಯುದ್ದವನ್ನು ಆರಂಭಿಸುತ್ತಾನೆ. ಕೋಟೆಯ ಮೇಲೆ ತೋಪನ್ನು ಹಾರಿಸಲು ಅಪ್ಪಣೆ ಮಾಡಿದ ಥ್ಯಾಕರೆಯ ಸೈನ್ಯದ ಮೇಲೆ ಕೋಟೆಯೊಳಗಿನಿಂದ ನುಗ್ಗಿಬಂದ ಕಿತ್ತೂರಿನ ಸಾವಿರಾರು ಸಂಖ್ಯೆಯ ವೀರರ ಪಡೆ ಒಂದೇ ಸಮನೆ ಧಾಳಿಗೆ ತೊಡಗುತ್ತದೆ. ಚೆನ್ನಮ್ಮಳ ಅಂಗರಕ್ಷಕನಾಗಿದ್ದ ಅಮಟೂರು ಬಾಳಪ್ಪ ಹಾರಿಸಿದ ಗುಂಡಿಗೆ ಥ್ಯಾಕರೆ ಬಲಿಯಾಗುತ್ತಾನೆ. ಸ್ಟೀವನ್ಸನ್ ಹಾಗೂ ಈಲಿಯಟ್ ಎನ್ನುವ ಇಬ್ಬರು ಅಧಿಕಾರಿಗಳು ಸೆರೆಯಾಗುತ್ತಾರೆ. ದೇಶದ್ರೋಹಿಗಳಾದ ಕನ್ನೂರು ವೀರಪ್ಪ, ಸರದಾರ ಮಲ್ಲಪ್ಪ ಅವರೂ ಬಲಿಯಾಗುತ್ತಾರೆ.

ಹೀಗೆ ಮೊದಲ ಬಾರಿಗೆ ಬ್ರಿಟೀಷರ ವಿರುದ್ದ ಕಾಳಗದಲ್ಲಿ ಗೆದ್ದು ತನ್ನ ನಾಡಿನ ಸ್ವಾತಂತ್ರ್ಯ ಪತಾಕೆಯನ್ನು ಹಾರಿಸಿದ ಚೆನ್ನಮ್ಮಳ ವಿರುದ್ದ ಬ್ರಿಟೀಷರು ಒಳ ಒಳಗೇ ಕತ್ತಿ ಮಸೆಯುತ್ತಿರುತ್ತಾರೆ. ಸಣ್ಣ ಸಂಸ್ಥಾನವೊಂದರ ರಾಣಿಯೊಬ್ಬಳಿಂದ ಸೋತು ಅವಮಾನಿತರಾದ ಬ್ರಿಟೀಷರಿಗೆ ಚೆನ್ನಮ್ಮಳ ಮೇಲೆ ಮತ್ತಷ್ಟು ದ್ವೇಷ ಕೆರಳುತ್ತದೆ.

ಇಬ್ಬರ ನಡುವೆ ಮತ್ತೆ ಪತ್ರ ವ್ಯವಹಾರಗಳು ಆರಂಭಗೊಳ್ಳುತ್ತವೆ. ಅದಾಗಿ 1824 ಡಿಸೆಂಬರ್ 2 ರಂದು ಚೆನ್ನಮ್ಮಳಲ್ಲಿ ಸೆರೆಯಾಳಾಗಿದ್ದ ಸ್ಟೀವನ್ಸನ್ ಹಾಗೂ ಈಲಿಯಟ್ ರ ಬಿಡುಗಡೆಯಾಗುತ್ತದೆ. ಇದಾದ ಮರುದಿನ ಎಂದರೆ ಡಿಸೆಂಬರ್ 3 1824 ರಂದು ಬ್ರಿಟೀಷರು ಮತ್ತೆ ಬೃಹತ್ ಸೈನ್ಯದೊಂದಿಗೆ ಕಿತ್ತೂರಿನ ಮೇಲೆ ಮುಗಿಬೀಳುತ್ತಾರೆ. ಡಿಸೆಂಬರ್ 4 ರಂದು ಸರ್ದಾರ ಗುರುಸಿದ್ದಪ್ಪನು ಸೆರೆಯಾಗುತ್ತಾನೆ. ಡಿಸೆಂಬರ್ 5, 1824 ರಂದು ಕೆಚ್ಚೆದೆಯ ವೀರ ರಾಣಿ ಚೆನ್ನಮ್ಮಾಜಿಯು ತಾನು ತನ್ನ ಸೊಸೆಯಂದಿರಾದ ವೀರಮ್ಮ ಹಾಗೂ ಜಾನಕಿಬಯಿಯವರ ಜತೆ ಕೈದಿಯಾಗುತ್ತಾಳೆ. ಅವರನ್ನು ತುರ್ತು ವಿಚಾರಣೆ ನಡೆಸಿದ (ವಿಚಾರಣೆ ನಡೆಸಿದ ನಾಟಕ ಆಡಿದ) ಬ್ರಿಟೀಷ್ ನ್ಯಾಯಾಸ್ಥಾನವು ಡಿಸೆಂಬರ್ 12 1824 ಕ್ಕೆ ಬೈಲಹೊಂಗಲದ ಕಾರಾಗ್ರಹಕ್ಕೆ ಸ್ಥಳಾಂತರಿಸುತ್ತಾರೆ. ಅಲ್ಲೇ ನಾಲ್ಕು ವರ್ಷಗಳ ಕಾಲ ಸೆರೆಯಾಳಾಗಿದ್ದ ಚೆನ್ನಮ್ಮಾಜಿಯು 1829 ಫೆಬ್ರವರಿ 2 ರಂದು ಅಲ್ಲಿಯೇ ಮರಣಹೊಂದುತ್ತಾಳೆ.

ಚೆನ್ನಮ್ಮಳ ಮರಣದ ಬಳಿಕವೂ ದೇಶನಿಷ್ಠರ ಹೋರಾಟ ಮುಂದುವರಿಯುತ್ತದೆ. ಯುದ್ದ ಖೈದಿಯಾಗಿದ್ದು ಬಿಡುಗಡೆಯಾದ ಅಪ್ರತಿಮ ದೇಶಭಕ್ತ ಸಂಗೊಳ್ಳಿ ರಾಯಣ್ಣನು ತಾನು ಚೆನ್ನಮ್ಮಳ ದತ್ತು ಪುತ್ರ ಶಿವಲಿಂಗಪ್ಪನ ಮುಂದಾಳತ್ವವನ್ನಿಟ್ಟುಕೊಂಡು ಕಿತ್ತೂರಿನ ಸ್ವಾತಂತ್ರ್ಯಕ್ಕಾಗಿ ಹೋರಾಡುತ್ತಾನೆ. ಆದರೆ 1830 ಫೆಬ್ರವರಿಯಲ್ಲಿ ನಮ್ಮವರೇ ಕೆಲ ವಿಶ್ವಾಸ ದ್ರೋಹಿಗಳು ರಾಯಣ್ಣನಿರುವ ಸ್ಥಳವನ್ನು ಕಂಪನಿ ಸರ್ಕಾರದವರಿಗೆ ತೋರಿಸಿ ಅವನನ್ನು ಸೆರೆಹಿಡಿಸುತ್ತಾರೆ. ಅದೇ 1830 ಮೇ ನಲ್ಲಿ ಕಿತ್ತೂರ ದೊರೆಯಾದ ಶಿವಲಿಂಗಪ್ಪ ಮತ್ತವನ ನಾಲ್ಕು ಸಾವಿರ ಬೆಂಬಲಿಗರು ತಾವು ಬ್ರಿಟೀಷರಿಗೆ ಸ್ವಯಂ ಶರಣಾಗುತ್ತಾರೆ. ಇದಾದ ಬಳಿಕ ಜುಲೈ 1830 ಕ್ಕೆ ಚೆನ್ನಮ್ಮಳ ಪ್ರೀತಿಯ ಸೊಸೆ ವೀರಮ್ಮ ತಾನು ಸೆರೆಮನೆಯಲ್ಲಿಯೇ ಸಾವನ್ನಪ್ಪುತ್ತಾಳೆ.

ಸರಿಸುಮಾರು ಆರು ತಿಂಗಳುಗಳ ತರುವಾಯ 1831, ಜನವರಿ 26 ರಂದು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನನ್ನು ಗಲ್ಲಿಗೇರಿಸಲಾಗುತ್ತದೆ.

ಹೀಗೆ ತನ್ನ ಪುಟ್ಟ ರಾಜ್ಯದ ಸ್ವಾತಂತ್ರ್ಯ ರಕ್ಷಣೆಗಾಗಿ ಕೆಚ್ಚೆದೆಯಿಂದ ಹೋರಾಟ ನಡೆಸಿದ ಕನ್ನಡ ನಾಡಿನ ಹೆಮ್ಮೆಯ ಮಹಿಳೆ ರಾಣಿ ಚೆನ್ನಮ್ಮಳ ಅಗಾಧ ದೇಶಪ್ರೇಮವು ಎಲ್ಲರಿಗೂ ಮಾದರಿಯಾಗುವಂತಹುದು.ಇಂದು ಕನ್ನಡಿಗರಾದ ನಾವೆಲ್ಲರೂ ಅವಳ ಹೋರಾಟವನ್ನು ನೆನೆಯುತ್ತಾ ಅವಳಂತೆ ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಟ ನಡೆಸಿದ ದೇಶದುದ್ದಗಲದ ಎಲ್ಲಾ ವಿರರ ತ್ಯಾಗ ಬಲಿದಾನಗಳನ್ನು ಸ್ಮರಿಸೋಣ.

ಜೈ ಹಿಂದ...


Sunday, 29 September 2019

ರಾಷ್ಟ್ರಪಿತರು:


ಭಾರತಕ್ಕೆ ಗಾಂಧೀಜಿ ಹೇಗೆ ರಾಷ್ಟ್ರಪಿತರೊ ಹಾಗೆ ಭೇರೆದೇಶಗಳಿಗೂ ರಾಷ್ಟ್ರಪಿತರಿದ್ದಾರೆ.ಪ್ರಮುಖ ದೇಶಗಳ ರಾಷ್ಟ್ರಪಿತರು.
§  ಎಂ.ಕೆ.ಗಾಂಧಿ: ಭಾರತ
§  ಜಾರ್ಜ್ ವಾಷಿಂಗ್ಟನ್ : ಅಮೆರಿಕಾ
§  ನೆಲ್ಸನ್ ಮಂಡೇಲಾ : ದಕ್ಷಿಣ ಆಫ್ರಿಕಾ
§  ಮಹಮ್ಮದ್ ಆಲಿ ಜಿನ್ನ : ಪಾಕಿಸ್ತಾನ
§  ಸನ್ ಯಾತ್-ಸೇನ್ : ಚೀನಾ
§  ಮುಜಿಬುರ್ ರೆಹಾಮನ್ : ಬಾಂಗ್ಲದೇಶ
§  ಡಿ. ಎಸ್.ಸೇನಾ ನಾಯಕೆ : ಶ್ರೀಲಂಕಾ
§  ರಾಜ ತ್ರಿಭುವನ್ : ನೇಪಾಳ
§  ಕೆ,ಎಂ.ಡಿ ಕೋಸ್ಪೆಡೆಸ್ : ಕ್ಯೂಬಾ
§  ಪೀಟರ್ : ರಷ್ಯಾ
§  ಇಬ್ನ್ ಸೌದ್ : ಸೌದಿ ಅರೇಬಿಯಾ
§  ಸುಲ್ತಾನ್ ಆಲ್ ನಹ್ಯಾನ್ : ಯುಎಇ
§  ಅಹ್ಮದ್ ಷಾ ದುರಾನಿ : ಆಫ್ಘಾನಿಸ್ತಾನ
§  ಡಾನ್ ಜೋಸ್ ಡೆ : ಅರ್ಜೆಂಟಿನಾ
§  ಅಂಗ್ ಸ್ಯಾನ್ : ಬರ್ಮಾ
§  ಜಾನ್ .ಮ್ಯಾಕ್ಡೊನಾಲ್ಡ್ : ಕೆನಡಾ
§  ಸೈರಸ್ ದಿ ಗ್ರೇಡ್ : ಇರಾನ್
§  ಡೇವಿಡ್ ಬೆನ್ ಗುರಿಯನ್ : ಇಸ್ರೇಲ್
§  ಡಿ ಸಾವೊ ಯಿಯಾ : ಇಟಲಿ
§  ಜೋಮೋ ಕೆನ್ಯಾಟ್ಟಾ : ಕೀನ್ಯಾ

Wednesday, 11 September 2019

ಸ್ವಾಮಿ ವಿವೇಕಾನಂದ ಸರ್ವಧರ್ಮ ಸಮ್ಮೇಳನದಲ್ಲಿ ಮಾಡಿದ ಭಾಷಣ. [ಸೆಪ್ಟೆಂಬರ್ 11, 1893]


ಸರ್ವಧರ್ಮಸಮ್ಮೇಳನ, ದ ಭಾಷಣದಲ್ಲಿ ಪ್ರತಿಪಾದಿಸಿದ ಹಿಂದೂ ಧರ್ಮದ ಸಿದ್ಧಾಂತಗಳು, ಮಿಂಚಿನಂತೆ ಅಲ್ಲಿನ ಜನರನ್ನು ಆಕರ್ಶಿಸಿದವು. ವಿವೇಕಾನಂದರ ಅತಿ ಪ್ರಸಿದ್ಧ ಯಶಸ್ಸು೧೮೯೩ ರಲ್ಲಿ ಶಿಕಾಗೊ ನಗರದಲ್ಲಿ ನಡೆದ ಪ್ರಪಂಚ ಮತಗಳ ಸಂಸತ್ತಿನಲ್ಲಿ ಬಂದಿತು. ಅವರ ಭಾಷಣದಲ್ಲಿ ಮೊದಲ ವಾಕ್ಯವಾಗಿದ್ದ "ಅಮೆರಿಕದ ಸಹೋದರ ಸಹೋದರಿಯರೇ" ಎಂಬ ವಾಕ್ಯ ಚಿರಸ್ಮರಣೀಯವಾಗಿದೆ.
'ವಿಶ್ವದ ಧರ್ಮಗಳ ಸಂಸತ್ತು' ಸೆಪ್ಟೆಂಬರ್ 11, 1893 ರಂದು ವಿಶ್ವದ ಕೊಲಂಬಿಯನ್ ಪ್ರದರ್ಶನದ ಭಾಗವಾಗಿ ಈಗ ಚಿಕಾಗೋದ, "ಆರ್ಟ್ ಇನ್ಸ್ಟಿಟ್ಯೂಟ್ನ ಶಾಶ್ವತ ಸ್ಮಾರಕ ಕಲಾ ಭವನ" ದಲ್ಲಿ (ವಿಶ್ವದ ಕಾಂಗ್ರೆಸ್ ಸಹಾಯಕ ಕಟ್ಟಡ ಎಂದೂ ಗುರುತಿಸಲ್ಪಟ್ಟಿದೆ) ಪ್ರಾರಂಭವಾಯಿತು. ವಿವೇಕಾನಂದರು ಆ ದಿನ ತಮ್ಮ ಮೊದಲ ಉಪನ್ಯಾಸವನ್ನು ನೀಡಿದರು. ಇವರ ಸರದಿಯನ್ನು ತುಂಬಾ ಮುಂದೂಡುವಿಕೆಯ ನಂತರ ಮಧ್ಯಾಹ್ನದ ಹೊತ್ತಿಗೆ ಇವರ ಸರದಿ ಬಂದಿತು. ಆರಂಭದಲ್ಲಿ ಅವರು ಆತಂಕಕ್ಕೊಳಗಾಗಿದ್ದರೂ, ಅವರು ಹಿಂದೂ ವಿದ್ಯಾ ದೇವತೆಯಾದ ಸರಸ್ವತಿಗೆ ನಮಸ್ಕರಿಸಿದರು, ಮತ್ತು ಅವರು ತಮ್ಮ ದೇಹದಲ್ಲಿ ಹೊಸ ಶಕ್ತಿಯನ್ನು ಪಡೆದುಕೊಂಡಿರವುದಾಗಿ ಭಾವಿಸಿದರು; ಯಾರೋ ಅಥವಾ ಇನ್ನೊಬ್ಬರು ತಮ್ಮ ದೇಹವನ್ನು ಆಕ್ರಮಿಸಿಕೊಂಡಿದ್ದಾರೆ ಎಂದು ಅವರು ಭಾವಿಸಿದರು- (ಅದು"ದಿ ಸೋಲ್ ಆಫ್ ಇಂಡಿಯಾ, ಋಷಿಯ ಪ್ರತಿಧ್ವನಿ, ರಾಮಕೃಷ್ಣರ ಧ್ವನಿ, ಪುನರುತ್ಥಾನಗೊಂಡ ಸಮಯದ ಚೈತನ್ಯದ ಮುಖವಾಣಿ") ನಂತರ "ಸಿಸ್ಟರ್ಸ್ ಅಂಡ್ ಬ್ರದರ್ಸ್ ಆಫ್ ಅಮೆರಿಕಾ!" ಎಂದು ಸಂಬೋಧಿಸಿ ಮಾತು ಆರಂಭಿಸಿದರು. ಈ ಮಾತುಗಳಿಗೆ ಅವರು ಅಲ್ಲಿದ್ದ ಏಳು ಸಾವಿರ ಜನಸಮೂಹದಿಂದ 'ನಿಂತು ಚಪ್ಪಾಳೆಯ ಮೆಚ್ಚಗೆ ಸೂಚಿಸಿಸ ಗೌರವ' ಪಡೆದರು, ಅದು ಎರಡು ನಿಮಿಷಗಳ ಕಾಲ ನಡೆಯಿತು. ಮೌನವನ್ನು ಪುನಃಸ್ಥಾಪಿಸಿದಾಗ ಅವರು ತಮ್ಮ ಭಾಷಣವನ್ನು ಪ್ರಾರಂಭಿಸಿದರು. "ವಿಶ್ವದ ಅತ್ಯಂತ ಪ್ರಾಚೀನ ವೈದಿಕ ಕ್ರಮ ಅನುಸರಿಸಿದ ಸನ್ಯಾಸಿಗಳ, ಜಗತ್ತಿಗೆ ಸಹಿಷ್ಣುತೆ ಮತ್ತು ಸಾರ್ವತ್ರಿಕ ಸ್ವೀಕಾರ ಎರಡನ್ನೂ ಕಲಿಸಿದ ಧರ್ಮದ ಪರವಾಗಿ ಅವರು ಯುವ ರಾಷ್ಟ್ರಗಳನ್ನು ಅಭಿನಂದಿಸಿದರು.!" (ಭಾರತಕ್ಕಿಂತ ಅವು ಕಿರಿಯ/ ಯುವ ರಾಷ್ಟ್ಟ್ರಗಳು)
ಈ ಸಂದರ್ಭದಲ್ಲಿಯೇ ಪಾಶ್ಚಾತ್ಯ ರಾಷ್ಟ್ರಗಳಲ್ಲಿ ಹಿಂದೂ ಧರ್ಮದ ಬಗೆಗೆ ಆಸಕ್ತಿಯನ್ನೂ ಕೆರಳಿಸಿದರು. 'ಪೂರ್ವ ದೇಶದ ವಿಚಿತ್ರ ಧರ್ಮ' ಎಂದು ಪರಿಗಣಿತವಾಗಿದ್ದ ಹಿಂದೂ ಧರ್ಮದ ತಾತ್ವಿಕ ಹಾಗೂ ಧಾರ್ಮಿಕ ಮೂಲಭೂತ ಮಹತ್ವವುಳ್ಳ ಸಂಪ್ರದಾಯಗಳು, ಪಾಶ್ಚಾತ್ಯ ರಾಷ್ಟ್ರಗಳಲ್ಲಿಯೂ ಗುರುತಿಸಲ್ಪಟ್ಟವು. ಈ ಸಂದರ್ಭದ ಕೆಲವೇ ವರ್ಷಗಳಲ್ಲಿ 'ನ್ಯೂಯಾರ್ಕ್' ಮತ್ತು 'ಲಂಡನ್' ನಗರಗಳಲ್ಲಿ ವೇದಾಂತ ಕೇಂದ್ರಗಳನ್ನು ಸ್ಥಾಪಿಸಿ ಅನೇಕ ವಿಶ್ವವಿದ್ಯಾಲಯಗಳಲ್ಲಿ ಭಾಷಣಗಳನ್ನು ಮಾಡಿದರು.
ಇದರ ನಂತರ ಭಾರತಕ್ಕೆ ಮರಳಿ ರಾಮಕೃಷ್ಣ ಮಿಷನ್ ಅನ್ನು ಸ್ಥಾಪಿಸಿದರು. ಹಾಗೆಯೇ "ಆತ್ಮನೋ ಮೋಕ್ಷಾರ್ಥಂ ಜಗದ್ ಹಿತಾಯ ಚ" (ಸ್ವತಃ ಮೋಕ್ಷಕ್ಕಾಗಿ ಮತ್ತು ಜಗತ್ತಿನ ಹಿತಕ್ಕಾಗಿ) ಎಂಬ ತತ್ತ್ವವನ್ನೂ ಸ್ಥಾಪಿಸಿದರು. ಇದು ಈಗ ಭಾರತದ@ ಧಾರ್ಮಿಕ ಸಂಸ್ಥೆಗಳಲ್ಲಿ ಬಹಳ ಹೆಸರು ಮಾಡಿರುವ ಮತ್ತು ಗೌರವಿತ ಸಂಸ್ಥೆಯಾಗಿದೆ.
'ಸ್ವಾಮಿ ವಿವೇಕಾನಂದ'ರು ದಿವಂಗತರಾದಾಗ ಕೇವಲ ೩೯ ವರ್ಷದವರಾಗಿದ್ದರು. ಯುವಕರಿಗೆ ದಾರಿ ದೀಪವಾಗಿದ್ದರು. ಸ್ವಾಮಿ ಅವರ ಭಾಷಣದ ಆಯ್ದ ಭಾಗ ಹೀಗಿದೆ:-"ನಾನು ಮಾಡಿರುವ ಅಲ್ಪ ಕಾರ್ಯ ಕೇವಲ ನನ್ನಲ್ಲಿರುವ ಶಕ್ತಿಯಿಂದಲ್ಲ. ನನ್ನ ಪರಮಮಿತ್ರ ಪ್ರಿಯತಮ ಮಾತೃಭೂಮಿಯಿಂದ ಹೊರಟ ಉತ್ತೇಜನ ಶುಭಾಶಯ ಆಶೀರ್ವಾದಗಳು".

Thursday, 25 July 2019

ಕಾರ್ಗಿಲ್ ವಿಜಯ ದಿವಸ 26 ಜುಲೈ.


ಕಾರ್ಗಿಲ್ ಯುದ್ಧದ ಆಪರೇಷನ್ ವಿಜಯ್ ನ ನಂತರ ಹೆಸರಿಸಲ್ಪಟ್ಟಿದೆ . ಈ ದಿನ, 26 ಜುಲೈ 1999, ಭಾರತ ಯಶಸ್ವಿಯಾಗಿ ಪಾಕಿಸ್ತಾನಿ ಒಳನುಗ್ಗುವವರನ್ನು ತಡೆಹಿಡಿದು ,ವಿಜಯ ಸಾಧಿಸಿತು. ಕಾರ್ಗಿಲ್ ಯುದ್ಧ ಜುಲೈ 26 ರಂದು ಕೊನೆಗೊಂಡಿತು. 60ಕ್ಕೂ ಹೆಚ್ಚು ದಿನಗಳಕಾಲ ನಡೆದ ಈ ಯುದ್ಧ ಎರಡೂ ಕಡೆಗಳಲ್ಲಿ( ಭಾರತ ಮತ್ತು ಪಾಕಿಸ್ತಾನ) ಭಾರಿ ಪ್ರಮಾಣದ ಸಾವುನೋವುಗಳಿಗೆ ಕಾರಣವಾಯಿತು. ಪಾಕಿಸ್ತಾನ ಅಂತರರಾಷ್ಟ್ರೀಯ ರಾಜತಾಂತ್ರಿಕ ಒತ್ತಡಡ ನಂತರ ಈ ಅಭಿಯಾನದಿಂದ ಹಿಂತೆಗೆದುಕೊಳ್ಳುವಂತಾಯಿತು .
ಕಾರ್ಗಿಲ್ ವಿಜಯ್ ದಿವಸ, ಕಾರ್ಗಿಲ್ ಸಮರದ ವೀರರ ಗೌರವಾರ್ಥ ಪ್ರತಿವರ್ಷ ಜುಲೈ 26 ರಂದು ಆಚರಿಸಲ್ಪಡುತ್ತಿದೆ . - ಕಾರ್ಗಿಲ್ ವಲಯ ಮತ್ತು ರಾಷ್ಟ್ರೀಯ ರಾಜಧಾನಿಯಾದ ದೆಹಲಿಯಲ್ಲಿ ಭಾರತದ ಪ್ರಧಾನಮಂತ್ರಿಯವರಿಂದ ಅಮರ್ ಜವಾನ್ ಜ್ಯೋತಿಗೆ ಗೌರವಾರ್ಪಣ ಮಾಡುವುದರ ಮೂಲಕ ಸಶಸ್ತ್ರ ಪಡೆಗಳ ಕೊಡುಗೆಯನ್ನು ನೆನಯಲಾಗುತ್ತದೆ.
ಇಂದು ಕಾರ್ಗಿಲ್ ಯುದ್ಧದ ವಿಜಯ ದಿವಸ. ಯುದ್ಧವಾಗಿ ಇಂದಿಗೆ 20 ವರ್ಷಗಳೇ ಕಳೆದಿವೆ.
ಟೈಗರ್ ಹಿಲ್ಸ್ ಗೆದ್ದ ಟೈಗರ್‌ಗಳಿಗೆ ನಮನ
ಕಾರ್ಗಿಲ್ ಕದನ. ಅದೊಂದು ಭಾರತದ ಇತಿಹಾಸದಲ್ಲಿ ಮರೆಯಲಾರದ ಯುದ್ಧ. ಭಾರತ-ಪಾಕಿಸ್ತಾನಗಳ ನಡುವೆ ನಡೆದ ನಾಲ್ಕನೇ ಯುದ್ಧ. ಉಭಯ ದೇಶಗಳ ನಡುವೆ ಸುಧಾರಿಸಲಾರದಷ್ಟು ಸಂಬಂಧ ಹಳಸಿದೆ ಎನ್ನುವುದಕ್ಕೆ ಈ ಯುದ್ಧಗಳು ನಿದರ್ಶನ.
ಮುಂದಿನ ಪೀಳಿಗೆ ನಮ್ಮ ಚರಿತ್ರೆಯ ಪುಟಗಳನ್ನು ತಿರುವಿ ಈ ಯುದ್ಧದ ವಿವರಗಳನ್ನು ತಿಳಿದುಕೊಳ್ಳಲು ಆಸಕ್ತಿ ತೋರಬಹುದು. ಏಕೆಂದರೆ ಈ ಯುದ್ಧ ಅಷ್ಟು ರೋಚಕವಾಗಿತ್ತು. ಶ್ರೀನಗರದಿಂದ 205 ಕಿ.ಮೀ. ದೂರದಲ್ಲಿರುವ ಕಾರ್ಗಿಲ್ ಈ ಹಿಂದೆ ಒಂದು ಜಿಲ್ಲಾಕೇಂದ್ರದ ಹೆಸರಾಗಿ ಉಳಿದಿತ್ತು. ದೇಶವಾಸಿಗಳಿಗೆ ಆ ಹೆಸರು ಅಷ್ಟೇನೂ ಪರಿಚಿತವಾಗಿರಲಿಲ್ಲ. ಆದರೆ ಈಗ ಕಾರ್ಗಿಲ್ ಎಂದ ಕೂಡಲೇ ದೇಶವಾಸಿಗಳ ನರನಾಡಿಗಳಲ್ಲಿ ಅದೇನೋ ಅವ್ಯಕ್ತ ಭಾವನೆಗಳ ಸಂಚಾರವಾಗುತ್ತದೆ. ಹಲವು ತೆರನಾದ ಭಾವನೆಗಳು ಉಕ್ಕಿ ಹರಿಯುತ್ತವೆ. ವಂಚನೆ, ಉದ್ವಿಗ್ನತೆ, ಕೋಪ, ದುಃಖ, ನಿರ್ಧಾರ, ಸಾಹಸ, ಪರಾಕ್ರಮ, ವಿಜಯ, ಸಂಭ್ರಮ – ಹೀಗೆ ಹತ್ತು ಹಲವು ಭಾವನೆಗಳು ಅನುರಣಿಸುತ್ತವೆ.
1999 ರ ಮೇ 8 ರಿಂದ ಜುಲೈ 14 ರವರೆಗೆ ನಡೆದ ಆ 74 ದಿನಗಳು, ದೇಶಾದ್ಯಂತ ಪೂರ್ತಿ ಕಾರ್ಗಿಲ್ ಯುದ್ಧದ್ದೇ ಸುದ್ದಿ. ಮಾಧ್ಯಮಗಳಲ್ಲಿ, ಟಿವಿ ಚಾನೆಲ್‌ಗಳಲ್ಲಿ ಯುದ್ಧದ ಸುದ್ದಿಗಳಿಗೇ ಆದ್ಯತೆ. ಉಳಿದೆಲ್ಲ ಕಾರ್ಯಕ್ರಮಗಳು ಮೂಲೆಗೆ. ಏನಾಯಿತು ಕಾರ್ಗಿಲ್‌ನಲ್ಲಿ ? ಇವತ್ತು ಪಾಕ್ ಶತ್ರುಗಳೆಷ್ಟು ಮಂದಿ ಸತ್ತರು ? ಭಾರತೀಯ ಸೇನೆ ಹೊಸದಾಗಿ ಯಾವ ಪ್ರದೇಶ ವಶಪಡಿಸಿಕೊಂಡಿತು ? ಎಂಬ ಹತ್ತು ಹಲವು ಪ್ರಶ್ನೆಗಳಿಗೆ ಉತ್ತರ ಹುಡುಕುವ ಜೊತೆಗೆ ಹೋರಾಟದಲ್ಲಿ ಹುತಾತ್ಮರಾದ ವೀರ ಯೋಧರ ಸುದ್ದಿ ಕೇಳಿ ಕಣ್ಣೀರು ಮಿಡಿದವರೆಷ್ಟೋ. ಯುದ್ಧ ಮುಗಿಯುವವರೆಗೆ ದೇಶ ತನ್ನೆಲ್ಲ ಮಾಮೂಲು ಸಮಸ್ಯೆಗಳನ್ನು ಬದಿಗಿಟ್ಟು ಕಾರ್ಗಿಲ್ ಕದನದ ಸುದ್ದಿಗಳಿಗಾಗಿ ಕಣ್ಣು, ಕಿವಿ ತೆರೆದು ಕುಳಿತಿದ್ದಂತೂ ನಿಜ. ಹಿಂದೆಂದೂ ಕಾಣದಂತಹ ಏಕತೆ ಈ ಯುದ್ಧದ ಸಂದರ್ಭದಲ್ಲಿ ಕಂಡುಬಂತು.
ಇದೇನು ನಾವಾಗಿ ಬಯಸಿದ ಯುದ್ಧವಲ್ಲ. ಕಾಲು ಕೆರೆದು, ಜಗಳ ತೆಗೆದು ನಾವಾಗಿ ಯುದ್ಧವನ್ನು ಮೈಮೇಲೆ ಎಳೆದುಕೊಂಡದ್ದಲ್ಲ. ನಿಜವಾಗಿ ಹೇಳುವುದಾದರೆ, ಲಾಹೋರ್‌ಗೆ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಬಸ್ ಯಾತ್ರೆ ಕೈಗೊಂಡ ಬಳಿಕ ಉಭಯ ದೇಶಗಳ ನಡುವೆ ಹೊಸದೊಂದು ಭಾಯಿ-ಭಾಯಿ ಶಕೆಯೇ ಆರಂಭವಾಗಬಹುದೆಂದು ಭಾವಿಸಲಾಗಿತ್ತು. ಜಂಗ್ ನ ಹೋನೇ ದೇಂಗೇ (ಯುದ್ಧ ಆಗಲು ಬಿಡುವುದಿಲ್ಲ) ಎಂದು ವಾಜಪೇಯಿ ಅವರು ಫೆಬ್ರವರಿ 21 ರಂದು ಲಾಹೋರ್‌ನಲ್ಲಿ ಪ್ರಧಾನಿ ನವಾಜ್ ಶರೀಫ್ ಭೇಟಿಯ ಬಳಿಕ ಘೋಷಿಸಿದ್ದರು. ಅದರಂತೆಯೇ ಅವರು ನಡೆದುಕೊಂಡರು.
ಆದರೆ ಆಗಿದ್ದೇ ಬೇರೆ. ಇಡೀ ಜಗತ್ತೇ ಬದಲಾವಣೆಯ ಹಾದಿ ತುಳಿಯುತ್ತಿದ್ದರೂ ಪಾಕಿಸ್ಥಾನ ಮಾತ್ರ ಭಾರತದ ವಿರುದ್ಧದ ತನ್ನ ದ್ವೇಷ ಭಾವನೆ ತೊರೆಯಲಿಲ್ಲ. ಆಕ್ರಮಣಕಾರಿ ಪ್ರವೃತ್ತಿಯನ್ನು ಅದು ಮರೆಯಲಿಲ್ಲ. ವಾಜಪೇಯಿ ತೋರಿದ ಸ್ನೇಹ ಹಸ್ತಕ್ಕೆ ಕೈಚಾಚಿ ಕುಲುಕಿದ ಅದು ಭಾರತದ ಬೆನ್ನಿಗೇ ಇರಿಯಿತು. ಅತ್ತ ಲಾಹೋರ್‌ನಲ್ಲಿ ನವಾಜ್ ಶರೀಫ್ ವಾಜಪೇಯಿ ಅವರು ಕೈಕುಲುಕುತ್ತಿರುವಾಗ ಇತ್ತ ಕಾರ್ಗಿಲ್, ಬಟಾಲಿಕ್, ದ್ರಾಸ್, ಮುಷ್ಕೊ ಕಣಿವೆಯುದ್ಧಕ್ಕೂ ಗಡಿನಿಯಂತ್ರಣ ರೇಖೆ ಅತಿಕ್ರಮಿಸಿ ಪಾಕ್ ಸೈನಿಕರು, ಮುಜಾಹಿದ್ದೀನ್ ಬಾಡಿಗೆ ಬಂಟರು ಅಡಗುದಾಣ ರಚಿಸಿಕೊಳ್ಳತೊಡಗಿದ್ದರು. ಯುದ್ಧದ ಸಿದ್ಧತೆ ಸಾಗಿತ್ತು. ಭಾರತದ ಸ್ನೇಹಕ್ಕೆ ಪಾಕ್ ನೀಡಿದ ಬೆಲೆ ಇಂತಹದು !
ಭಾರತ ಮಾನಸಿಕವಾಗಿ ಯುದ್ಧಕ್ಕೆ ಖಂಡಿತ ಸಿದ್ಧವಾಗಿರಲಿಲ್ಲ. ಅತಿಕ್ರಮಣಕಾರಿಗಳು ಗಡಿನಿಯಂತ್ರಣ ರೇಖೆ ದಾಟಿ ನಮ್ಮ ಸೇನೆಯ ಮೇಲೆ ದಾಳಿ ನಡೆಸಿದಾಗ ಇಡೀ ದೇಶವೇ ಆಘಾತಗೊಂಡಿತು. ಅನಿರೀಕ್ಷಿತ ದಾಳಿಗೆ ನಮ್ಮ ಕೆಲವು ಸೈನಿಕರೂ ಪ್ರಾರಂಭದಲ್ಲಿ ಬಲಿಯಾದರು. ಆದರೆ ಆನಂತರ ನಡೆದದ್ದೇ ಬೇರೆ. ಮೈ ಕೊಡವಿ ಮೇಲೆದ್ದ ನಮ್ಮ ಸೈನ್ಯ ಶತ್ರುಗಳನ್ನು ಸದೆಬಡಿದು ಗಡಿಯಾಚೆ ತೊಲಗಿಸುವವರೆಗೆ ವಿಶ್ರಮಿಸಲಿಲ್ಲ. ಸೀಮಿತ ಯುದ್ಧೋಪಕರಣ, ಪ್ರತಿಕೂಲ ಹವೆ, ಪಾಕ್ ವೈರಿ ಪಡೆಯ ಅತ್ಯಾಧುನಿಕ ಶಸ್ತ್ರಾಸ್ತ್ರಗಳು – ಯಾವುದಕ್ಕೂ ನಮ್ಮ ಯೋಧರು ಹೆದರಿ ಕಂಗೆಡಲಿಲ್ಲ. ಕೊರೆಯುವ ವಿಪರೀತ ಚಳಿಯಲ್ಲಿ ಪಂಡಿತ್ ನೆಹರು ವ್ಯಂಗ್ಯವಾಗಿ ಹೇಳುತ್ತಿದ್ದ ಒಂದಿಂಚೂ ಹುಲ್ಲು ಬೆಳೆಯದ ಪ್ರದೇಶದಲ್ಲಿ ನಮ್ಮ ಯೋಧರು ಅವಿತರವಾಗಿ ಶತ್ರುಪಡೆಯ ವಿರುದ್ಧ ಸೆಣಸಿದರು. ಕೊನೆಗೂ ವಿಜಯಲಕ್ಷ್ಮಿ ಒಲಿದದ್ದು ನಮಗೇ.
ಸಾಧನಗಳ ಕೊರತೆಗಳು ನಮ್ಮ ಧೀರ ಯೋಧರನ್ನು ಕಾಡಲಿಲ್ಲ. ಧೈರ್ಯ, ಪರಾಕ್ರಮ, ದೃಢ ನಿರ್ಧಾರಗಳೇ ಅವರ ಪ್ರಬಲ ಅಸ್ತ್ರಗಳಾದವು. ಆ ಅಸ್ತ್ರಗಳ ಮುಂದೆ ಪಾಕಿಗಳ ಬೇಳೆ ಬೇಯಲಿಲ್ಲ. ಬಹುಶಃ ಜಗತ್ತಿನಲ್ಲೇ ಇದೊಂದು ಕಠಿಣತಮ ಯುದ್ಧ ಆಗಿರಬಹುದು. ದುರ್ಗಮ ಪರ್ವತದೆತ್ತರವನ್ನು ಕಷ್ಟಪಟ್ಟು ಏರಿ ಹೋರಾಡಿದ ನಮ್ಮ ಇನ್‌ಫೆಂಟ್ರಿಗೆ ವಿಶ್ರಾಂತಿಯೆಂಬುದೇ ಇರಲಿಲ್ಲ. ಕೆಲವು ಬಾರಿ ಇಡೀ ರಾತ್ರಿ ಯುದ್ಧ ಮಾಡಬೇಕಾಗಿ ಬಂದರೆ ಇನ್ನು ಕೆಲವು ಸಲ 36 ಗಂಟೆಗಳ ಕಾಲ ಶತ್ರುಪಡೆಯೊಂದಿಗೆ ಸೆಣಸಿದ ಸಂದರ್ಭಗಳೂ ಉಂಟು. ಭೂಸೈನ್ಯದ ಜೊತೆ ಆರ್ಟಿಲರಿ ಹಾಗೂ ವಾಯುದಳ ಕೂಡ ಹೋರಾಡಿತು. ಸೇನೆಯ ವೈದ್ಯಾಧಿಕಾರಿಗಳು ಅಸುರಕ್ಷಿತ ಬಂಕರ್‌ಗಳಲ್ಲಿ ಗಾಯಗೊಂಡು ಕುಸಿದುಬಿದ್ದಿದ್ದ 584 ಕ್ಕೂ ಹೆಚ್ಚು ಯೋಧರ ಶುಶ್ರೂಷೆಯಲ್ಲಿ ಹಗಲಿರುಳೂ ಶ್ರಮಿಸಿದರು. ಭಾರತ ಸೇನೆ ಇದುವರೆಗೆ ಕಂಡ ಅತ್ಯಂತ ಕಠಿಣ ಯುದ್ಧವಿದಾಗಿತ್ತು. ಈ ಯುದ್ಧದಲ್ಲಿ ಒಂದೋ ಹೋರಾಡಬೇಕಿತ್ತು, ಇಲ್ಲವೇ ಹೋರಾಡುತ್ತಾ ಮಡಿಯಬೇಕಾಗಿತ್ತು. ಬೇರೆ ಅವಕಾಶವೇ ಅವರಲ್ಲಿರಲಿಲ್ಲ. ಹಿಮ್ಮೆಟ್ಟುವ ಸಾಧ್ಯತೆಯಂತೂ ಇರಲೇ ಇಲ್ಲ. ಜುಲೈ 14 ರಂದು ವಿಜಯ್ ಕಾರ್ಯಾಚರಣೆ ಯಶಸ್ವಿಯಾಗಿ ಮುಗಿದಾಗ ತ್ರಿವರ್ಣಧ್ವಜ ರಕ್ತದಲ್ಲಿ ಸಂಪೂರ್ಣ ತೊಯ್ದು ಕೆಂಪಾಗಿತ್ತು. ಜುಲೈ 14 ರಂದು ಅಟಲ್ ಬಿಹಾರಿ ವಾಜಪೇಯಿಯವರು ಆಪರೇಷನ್ ವಿಜಯ್ ಯಶಸ್ವಿಯಾಗಿದೆ ಎಂದು ಘೋಷಿಸಿದರು. ಆದರೆ ಕಾರ್ಗಿಲ್ ಯುದ್ಧ ಅಧಿಕೃತವಾಗಿ ಮುಕ್ತಾಯಗೊಂಡಿದ್ದು, ಭಾರತೀಯ ಸೇನೆ ಪಾಕ್ ನುಸುಳುಕೋರರನ್ನು ಸಂಪೂರ್ಣವಾಗಿ ಹೊರದಬ್ಬಲಾಗಿದೆ ಎಂದು ಘೋಷಿಸಿದ ದಿನ ಜುಲೈ 26 ರಂದು. ಆದ್ದರಿಂದ ಪ್ರತಿ ವರ್ಷ ಜುಲೈ 26 ರಂದು ಕಾರ್ಗಿಲ್ ವಿಜಯೋತ್ಸವವನ್ನು ಆಚರಿಸಲಾಗುತ್ತದೆ.
ಕಾರ್ಗಿಲ್ ಕದನ ಇಡೀ ದೇಶದ ಮಾನಸಿಕತೆಯ ಮೇಲೆ ಆಳವಾದ ಮುದ್ರೆಯೊತ್ತಿದೆ. ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ, ಲಡಾಖ್‌ನಿಂದ ನಾಗಾಲ್ಯಾಂಡ್‌ವರೆಗೆ ದೇಶದುದ್ದಗಲಕ್ಕೆ ದೇಶಭಕ್ತಿಯ ಪ್ರವಾಹವೇ ಹರಿದಿದೆ. ಯುದ್ಧದಲ್ಲಿ ಹುತಾತ್ಮರಾದ ವೀರಯೋಧರನ್ನು ಇಡೀ ದೇಶ ಹೀರೋಗಳಂತೆ ಕಂಡು ಗೌರವ ಸಲ್ಲಿಸಿದೆ, ಆರಾಧಿಸಿದೆ. ಜಾತಿ, ಮತ, ಧರ್ಮ, ಪ್ರಾಂತ, ಭಾಷೆ ಯಾವುದೂ ಇದಕ್ಕೆ ಅಡ್ಡಿಯಾಗಲಿಲ್ಲವೆನ್ನುವುದು ವಿಶೇಷ. ದೆಹಲಿಯ ಸಮೀಪವಿರುವ ನೊಯ್ಡಾಕ್ಕೆ ಲೆಫ್ಟಿನೆಂಟ್ ವೈಜಯಂತ್ ಥಾಪರ್ ಅವರ ಪಾರ್ಥಿವ ಶರೀರ ಆಗಮಿಸಿದಾಗ, ಅವರ ಅಂತ್ಯಕ್ರಿಯೆಗಾಗಿ ಇಡೀ ಊರು ತನ್ನ ವ್ಯವಹಾರಗಳನ್ನು ಸ್ಥಗಿತಗೊಳಿಸಿತ್ತು. ದಲಿತ ಜಾತಿಗೆ ಸೇರಿದ ಸಿಪಾಯಿ ದಿನೇಶ್ ವಘೇಲಾರ ಪಾರ್ಥಿವ ಶರೀರದ ಅಂತಿಮ ಸಂಸ್ಕಾರದ ವೇಳೆ ಗುಜರಾತಿನ ಖೇಡಾ ಜಿಲ್ಲೆಯ ನಿರ್ಮಲಿ ಗ್ರಾಮದ ಎಲ್ಲ ಜಾತಿಯವರೂ ಒಟ್ಟಾಗಿ ಸೇರಿ ಆತನ ವೀರಮರಣಕ್ಕೆ ಕಣ್ಣೀರು ಹಾಕಿದರು. ಆ ಯೋಧನ ಪರಾಕ್ರಮಕ್ಕೆ ಅವರೆಲ್ಲ ಹೆಮ್ಮೆಪಟ್ಟರು. ಈ ಯುದ್ಧ ಇಡೀ ದೇಶವನ್ನೇ ಒಂದುಗೂಡಿಸಿದೆ ಎಂಬುದರಲ್ಲಿ ಎರಡು ಮಾತಿಲ್ಲ.
ಟೈಗರ್ ಹಿಲ್ಸ್, ತೊಲೊಲಿಂಗ್ ಹಿಮಪರ್ವತಗಳು ಸಿಖ್ಖರು, ಪಂಜಾಬಿಗಳು, ಗೂರ್ಖರು, ಬಿಹಾರಿಗಳು, ನಾಗಾಗಳು, ಬಂಗಾಲಿಗಳು, ಮಲೆಯಾಳಿಗಳು, ಮರಾಠರು, ಜಾಟರು, ಕನ್ನಡಿಗರು, ತಮಿಳರು… ಹೀಗೆ ಎಲ್ಲರ ರಕ್ತದಿಂದ ತೊಯ್ದಿದೆ. ಈ ರಕ್ತದ ಕಲೆಗಳ ಮೇಲೆ ಮತ್ತೆ ಚಳಿಗಾಲದಲ್ಲಿ ಹಿಮ ಹರಡಿಕೊಳ್ಳಲಿದೆ. ಆದರೆ ಅವರೆಲ್ಲರ ತ್ಯಾಗ, ಬಲಿದಾನಗಳು ಎಂದಿಗೂ ಅಳಿಯಲಾರವು. ಭಾರತಕ್ಕೆ ಅದೆಂತಹ ಅದಮ್ಯ ಶಕ್ತಿ ಇದೆಯೆಂದು ಚರಿತ್ರೆ ಓದಿದ ಮುಂದಿನ ಪೀಳಿಗೆಗೆ ಖಂಡಿತ ಆಶ್ಚರ್ಯಚಕಿತವಾಗದೇ ಇರದು. ಭಾರತದ ಆತ್ಮಶಕ್ತಿ ಸುಪ್ತವಾಗಿರಬಹುದು. ಆದರೆ ಸಮಯ ಬಂದಾಗ ಅದು ಜಾಗೃತವಾಗಿ ಇಡೀ ದೇಶವನ್ನು ಬಡಿದೆಬ್ಬಿಸಬಲ್ಲದೆಂಬುದಕ್ಕೆ ಕಾರ್ಗಿಲ್ ಕದನ ಒಂದು ಜ್ವಲಂತ ಸಾಕ್ಷಿ.
ನಾಗಾಲ್ಯಾಂಡ್‌ನ ಕೊಹಿಮಾದಲ್ಲಿ ಅರ್ಧ ಶತಮಾನದ ಹಿಂದೆ ಸ್ಥಾಪಿಸಲಾದ ಒಂದು ಪ್ರತಿಮೆ ಇದೆ. ಯುದ್ಧದಲ್ಲಿ ಹೋರಾಡಿ ಕೆಳಗೆ ಕುಸಿಯುತ್ತಿರುವ ಯೋಧನೊಬ್ಬನ ಪ್ರತಿಮೆ ಅದು, ಅದರ ಕೆಳಗೊಂದು ವಾಕ್ಯ :
ನೀವು ಮನೆಗೆ ಹೋದಾಗ ಮನೆಯಲ್ಲಿದ್ದವರಿಗೆ ಹೇಳಿ : ನಿಮ್ಮ ನಾಳೆಗಳಿಗೆ ನಾವು ನಮ್ಮ ಈ ದಿನಗಳನ್ನು ತ್ಯಾಗ ಮಾಡಿದ್ದೇವೆ.
ಈ ಕೆತ್ತನೆ ಈಗ ಮಳೆಗೆ ತೊಯ್ದು ಚಳಿ, ಗಾಳಿಗೆ ತೊಯ್ದು ಮಸುಕಾಗಿದೆ. ಬರಹ ಮಸುಕಾದರೇನು ? ತಾಯ್ನಾಡಿನ ರಕ್ಷಣೆಗಾಗಿ ಹೋರಾಡುತ್ತಿರುವ ಯೋಧರ ವೀರಗಾಥೆ ಇಂದಿಗೂ ಅಕ್ಷರಶಃ ಈ ಮಾತನ್ನು ಮಾತ್ರ ನೆನಪಿಸುತ್ತಿದೆ. ಕಾರ್ಗಿಲ್ ಕದನ ಭೂಮಿಯಿಂದ ಹೆಣವಾಗಿ ಹುಟ್ಟೂರಿಗೆ ಪೆಟ್ಟಿಗೆಯಲ್ಲಿ ಬಂದ ಪ್ರತಿಯೊಬ್ಬ ಯೋಧರು ನಮ್ಮೆಲ್ಲರ ನಾಳೆಗಳಿಗಾಗಿ ತಮ್ಮ ಈ ದಿನಗಳನ್ನು ಬಲಿದಾನ ಮಾಡಿದ್ದಾರೆ.
ಕಾರ್ಗಿಲ್ ಯುದ್ಧದ ಸಂದರ್ಭದಲ್ಲಿ ಮಾಧ್ಯಮಗಳಲ್ಲಿ, ಟಿ. ವಿ. ಚಾನೆಲ್‌ಗಳಲ್ಲಿ ಜಾಹೀರಾತೊಂದು ತೇಲಿಬರುತ್ತಿತ್ತು. ‘They didn’t go down fighting for their lives in Kargil : but for ours’ ಅದರ ಹಿಂದೆಯೇ ಮತ್ತೊಂದು ವಾಕ್ಯ ತೇಲಿಬರುತ್ತಿತ್ತು. ‘They die for a stranger. And that stranger is you.’
ನಿಜ, ಕಾರ್ಗಿಲ್ ಕದನದಲ್ಲಿ ಸುಮಾರು 527 ಕ್ಕೂ ಹೆಚ್ಚು ವೀರ ಯೋಧರು ನಮಗಾಗಿ, ರಾಷ್ಟ್ರಕ್ಕಾಗಿ ಪ್ರಾಣಾರ್ಪಣೆ ಮಾಡಿದ್ದಾರೆ. ಸುಮಾರು 1,363 ಕ್ಕೂ ಹೆಚ್ಚು ಯೋಧರು ಗಾಯಗೊಂಡಿದ್ದರು. ಈಗಲೂ ಅನೇಕರು ದೇಶಕ್ಕಾಗಿ ಹುತಾತ್ಮರಾಗುತ್ತಲೇ ಇದ್ದಾರೆ. ಹದಿನೆಂಟು ಸಹಸ್ರ ಅಡಿಯೆತ್ತರಕ್ಕೆ ತಲುಪಿ ವೈರಿಪಡೆಯನ್ನು ಚೆಂಡಾಡುವುದು ಅಷ್ಟು ಸುಲಭವೇನಲ್ಲ. ಭಾರತೀಯ ಸೈನ್ಯ ಇದುವರೆಗೆ ಕಾದಾಡಿದ ಕದನಗಳಲ್ಲಿ ಕಾರ್ಗಿಲ್ ಸಮರ ಅತ್ಯಂತ ಕಠಿಣವಾದುದು. 1965 ಹಾಗೂ 1971 ರಲ್ಲಿದ್ದಂತೆ ಈ ಬಾರಿ ಇನ್‌ಫ್ರೆಂಟಿಯನ್ನು ಬೆಂಬಲಿಸುವ ಟ್ಯಾಂಕುಗಳಿಲ್ಲ. ಗತಪ್ರಾಣನಾಗಿ ಬಿದ್ದಾಗ ವಾಯುದಳದ ನೆರವು ಕೋರುವಂತಿರಲಿಲ್ಲ. ಯುದ್ಧರಂಗದಿಂದ ತಪ್ಪಿಸಿಕೊಂಡು ಸುರಕ್ಷಿತ ತಾಣಕ್ಕೆ ತಲುಪುವ ಪ್ರಶ್ನೆಯೇ ಈ ಬಾರಿ ಇರಲಿಲ್ಲ. ಹಾಗೆಂದೇ ಕಾರ್ಗಿಲ್ ಯುದ್ಧಕ್ಕೆ ತೆರಳಿದ ನಮ್ಮ ಸೈನಿಕರೊಬ್ಬೊಬ್ಬರದ್ದೂ ಒಂದೊಂದು ಸಾಹಸಗಾಥೆ. ಇವರಲ್ಲದೆ ರಾಷ್ಟ್ರಕ್ಕೆ ಪ್ರಾಣದೀವಿಗೆಯಾಗಿ ತಾಯ್ನಾಡಿಗಾಗಿ ತಲೆಯೊಡ್ಡಿದವರು ಇನ್ನೆಷ್ಟೋ … ಅಂತಹ ಎಲ್ಲಾ ಮಹಾನ್ ಚೇತನಗಳಿಗೆ ನಮ್ಮ ಶತಶತ ನಮನಗಳು.
ಈ ವಿಜಯ ದಿವಸದ ನೆನಪಿನೊಂದಿಗೆ ಸಮಾಜದಲ್ಲಿರುವ ಪ್ರತಿಯೊಬ್ಬ ಯುವಕರೂ ಸೈನಿಕರಂತೆ ದೇಶ, ಧರ್ಮ ರಕ್ಷಣೆಗೆ ತಮ್ಮ ಕರ್ತವ್ಯವನ್ನು ಪಾಲಿಸಿದಲ್ಲಿ ಸ್ವಸ್ಥ ಸಮಾಜದೊಂದಿಗೆ ಸುಭದ್ರ ರಾಷ್ಟ್ರ ನಿರ್ಮಾಣವಾಗುವುದರಲ್ಲಿ ಸಂಶಯವಿಲ್ಲ.
ಪ್ರತಿಯೊಬ್ಬ ಯುವಕರು ನಾಡಿನ ರಕ್ಷಣೆಗೆ ಮುಂದಾಗುತ್ತಾ ಸೈನಿಕರು ಗಡಿಯಲ್ಲಿ ನಾಡ ರಕ್ಷಣೆ ಮಾಡಿದಂತೆ ಹಾಗೂ ಸೈನಿಕರು ಶತ್ರುಗಳನ್ನು ದೇಶದಿಂದ ಹೊರಗಟ್ಟಿ ಈ ವಿಜಯದಿವಸ ಆಚರಣೆ ಮಾಡಿದ ರೀತಿಯಲ್ಲಿ ನಾವೆಲ್ಲರೂ ಸೇರಿ ಸಮಾಜದ ಸೈನಿಕರಾಗಿ ಸಮಾಜದಲ್ಲಿರುವ ದುಷ್ಟಶಕ್ತಿಗಳನ್ನು ಹೊರಗಟ್ಟುವ ಸಂಕಲ್ಪ ಮಾಡೋಣ.
ಕಾಶ್ಮೀರದ ಶ್ರೀನಗರದಿಂದ ೨೦೫ಕಿ.ಮೀ.ಗಳ ದೂರದಲ್ಲಿರುವ ಕಾರ್ಗಿಲ್ ಕಠಿಣವಾದ ನೀರ್ಗಲ್ಲುಗಳಿಂದ ಆವೃತವಾದ, ಪ್ರಪಂಚದ ಕೆಲವು ಅತ್ಯಂತ ಎತ್ತರದ ಪರ್ವತಗಳಿಂದ ಕೂಡಿದ ಲಡಾಖ್ ಶ್ರೇಣಿಗೆ ಸೇರಿದ ಪ್ರದೇಶ. ಶ್ರೀನಗರ ಮತ್ತು ಲೇಹ್ ಪ್ರದೇಶಕ್ಕೆ ಇರುವ ಏಕೈಕ ಭೂಮಾರ್ಗ. ಅತ್ಯಂತ ಕ್ಲಿಷ್ಟ ಮತ್ತು ದುರ್ಗಮವಾದ ಭೂ ಸರಹದ್ದು. ವರ್ಷದ ಮುಕ್ಕಾಲು ಅವಧಿಯಲ್ಲಿ, ೦೪೮ ದೀಗ್ರಿ ಸೆಲ್ಸಿಯಸ್ ತಾಪಮಾನವಿರುವ ಶೀತಲ ಮರಭೂಮಿ. ೧೬೦ಕಿ.ಮೀ.ಗಳ ಹಿಮಚ್ಛಾದಿತ ಪರ್ವತ ಹೊಂದಿರುವ ಊಹಾತೀತ ಸ್ಥಳ.
`ಕಾಶ್ಮೀರವನ್ನು ತನ್ನದಾಗಿಸಿಕೊಳ್ಳಬೇಖೂ. ಸಿಯಾಚಿನ್ ನೀರ್ಗಲ್ಲಿನ ಮೇಲೆ ಸಂಪೂರ್ಣ ಒಡೆತನ ಹೊಂದಬೇಕೆಂಬ ದುರಾಸೆಗೆ ಮತ್ತು ಅಂತಾರಾಷ್ಟ್ರೀಯ ಗಮನ ತನ್ನತ್ತ ಸೆಳೆದುಕೊಳ್ಳಲು ಪಾಕ್ ಈ ಪ್ರದೇಶಕ್ಕೆ ತನ್ನ ಸೇನೆ ನುಗ್ಗಿಸಿತ್ತು. ಈ ಆಕ್ರಮಣಕ್ಕೆ ಪಾಕಿಸ್ತಾನಕ್ಕೀ ಸೇನೆ ಕೊಟ್ಟ ಹೆಸರು `ಆಪರೇಷನ್ ಬದ್ರ್'.
ಭಾರತೀಯ ಭೂಸೇನೆ ಮತ್ತು ವಾಯುಸೇನಾ ಪಡೆಗಳು ಜಂಟಿಯಾಗಿ ಮೇ ಮತ್ತು ಜುಲೈ ೧೯೯೯ರಲ್ಲಿ ಜಯಿಸಿದ್ದು ಕಾರ್ಗಿಲ್ ಕದನ. ಈ ಕ್ರಿಯೆಗೆ ಕೊಟ್ಟ ನಾಮಧೇಯ `ಆಪರೇಶನ್ ವಿಜಯ್'. ಭಾರತೀಯ ಸೇನಾ ಇತಿಹಾಸದಲ್ಲೇ ಅತ್ಯಂತ ಮಹತ್ತರವಾದ ವಿಜಯವದು. ಸಮುದ್ರಮಟ್ಟದಿಂದ ಅತೀ ಎತ್ತರ ಪ್ರದೇಶದಲ್ಲಿ ನಡೆದ ಮೊದಲ ಯುದ್ಧವೂ ಹೌದು.
೬೦ದಿನಗಳ ಕಾಲ ರಾತ್ರಿ ಹಗಲೂ ಸತತ ಕಾದಾಟದ ನಂತರ ೫೭೨ ಭಾರತೀಯ ಯೋಧರು ದೇಶಕ್ಕಾಗಿ ಪ್ರಾಣ ತೆತ್ತಿದ್ದಕ್ಕೆ ೧೯೯೯ರ ಜುಲೈ ೨೬ರಂದು ವಿಜಯ ಸಿಕ್ಕಿತು. ಸಿಪಾಯಿಗಳ ಗೌರವಾರ್ಥವಾಗಿ ಅಂದಿನಿಂದ ಈ ದಿನವನ್ನು ದೇಶದಾದ್ಯಂತ `ಕಾರ್ಗಿಲ್ ವಿಜಯ ದಿವಸ' ಎಂದು ಆಚರಿಸಲಾಗುತ್ತದೆ.
ಕಾರ್ಗಿಲ್ ರಣಾಂಗಣದಲ್ಲಿ ಜೀವದ ಹಂಗು ತೊರೆದು ಹೋರಾಡಿ ಮಡಿದ ಹಲವಾರು ಯೋಧರ ಜೀವನಗಾಥೆಗಳು ಸಂಕ್ಷಿಪ್ತವಾಗಿ ಬಿಂಬಿಸುವ ಪ್ರಯತ್ನ ಇಲ್ಲಿದೆ.
ಜಸ್ವಿಂದರ್ ಸಿಂಗ್ ಭರವಸೆ:
"ನೀನೆನೂ ಹೆದರಬೇಕಾಗಿಲ್ಲ. ನಾನು ಕಾಶ್ಮೀರದಲ್ಲಿ ಮೂರು ವರ್ಷಗಳ ಕಾಲ ಉಗ್ರಗಾಮಿಗಳ ವಿರುದ್ಧ ಹೋರಾಡಿರುವೆ" - ಸೈನಿಕ ಸಮವಸ್ತ್ರದ ತೋಳು ಮಡಚುತ್ತ ಕಂಬನಿದುಂಬಿದ ತನ್ನ ೨೦ರ ಹರೆಯದ ಪತ್ನಿ ಗುರುದಯಾರ್ ಕೌರ್ಗೆ ಸಿಪಾಯಿ ಜಸ್ವಿಂದರ್ ಸಿಂಗ್ ಬೆಚ್ಚನೆಯ ಭರವಸೆ ಇತ್ತ. ಆತ ಪಾಕ್ ಪಡೆಗಳನ್ನು ಬಲಿ ತೆಗೆದುಕೊಳ್ಳಲು ಕಾರ್ಗಿಲ್ ಯುದ್ಧಭೂಮಿಗೆ ಹೊರಟಿದ್ದ.
ಕೌರ್ ಜಸ್ವಿಂದರ್ಸಿಂಗ್ನನ್ನು ಮದುವೆಯಾಗಿ ಇನ್ನೂ ನಾಲ್ಕು ತಿಂಗಳು ಕಳೆದಿತ್ತಷ್ಟೆ. ಕಂಗಳ ತುಂಬಾ, ಮನದ ತುಂಬಾ ಅದೇನೇನೋ. ದಾಂಪತ್ಯ ಜೀವನದ ಹೊಂಗನಸುಗಳನ್ನು ತುಂಬಿಕೊಂಡಿದ್ದಳು. ಯುದ್ಧ ಮುಗಿದು ಪತಿ ಮನೆಗೆ ಮರಳಿದರೆ ಸಾಕು, ತಾನು ಕಟ್ಟಿಕೊಂಡ ಒಂದಿಷ್ಟು ಕನಸುಗಳಾದರೂ ನನಸಾಗಬಹುದೆಂಬ ಲೆಕ್ಕಾಚಾರ ಹಾಕಿದ್ದಳು.
ಗುರುದಯಾರ್ ಕೌರ್ ತನ್ನ ಪತಿ ಜಸ್ವಿಂದರ್ ಸಿಂಗ್ನನ್ನು ಮದುವೆಯಲ್ಲಿ ನೋಡಿದ್ದೆಷ್ಟೋ ಅಷ್ಟೆ. ಅದೇ ಆಕೆಯ ದಾಂಪತ್ಯ ಬದುಕಿನ ಅಮೃತಘಳಿಗೆಗಳು. ಅನಂತರ ಆ ಅಮೃತ ಘಳಿಗೆಗಳು ಆಕೆಯ ಬಾಳಿನಲ್ಲಿ ಮತ್ತೆಂದೂ ಬರಲಿಲ್ಲ. ಜಸ್ವಿಂದರ್ ಸಿಂಗ್ ಪ್ಲೈವು ಡ್ ಪೆಟ್ಟಿಗೆಯೊಂದರಲ್ಲಿ ಹೆಣವಾಗಿ ಮನೆಯಂಗಳಕ್ಕೆ ಬಂದಿಳಿದಾಗ ಆಕೆ ಆ ಕ್ರೂರ ಸತ್ಯವನ್ನು ಎದುರಿಸಬೇಕಾಯಿತು.
ಜಸ್ವಿಂದರ್ ಸಿಂಗ್ ತಂದೆ ಜೋಗಿಂದರ್ ಸಿಂಗ್ ಪಂಜಾಬಿನ ಒಬ್ಬ ಆಂಧ್ರ ರೈತ. ಮೂರು ಎಕರೆ ಜಮೀನು ಹೊಂದಿರುವ ಅತನಿಗೆ ಮೂವರು ಗಂಡುಮಕ್ಕಳು. ಈ ಜಮೀನು ಮೂವರ ಮಕ್ಕಳ ಬದುಕಿಗೆ ಏನೇನೂ ಸಾಲದೆಂದು ನಿರ್ಧರಿಸಿದ ಕಿರ್ಯ ಜಸ್ವಿಂದರ್ ಸಿಂಗ್ ೧೭ನೇ ವಯಸ್ಸಿನಲ್ಲೇ ಮನೆಬಿಟ್ಟು ಹೊರಟ. ಅವನನ್ನು ಬರಸೆಳೆದು ಅಪ್ಪಿಕೊಂಡಿದ್ದು ಭಾರತೀಯ ಸೇನೆ. ಆತನ ಸಾಹಸದ ಬದುಕಿಗೆ ಆಸರೆ ನೀಡಿತು.
ಮೇ ೨೧ರಂದು ಜಸ್ವಿಂದರ್ ಸಿಂಗ್ ಸಾಹಸದ ಬದುಕಿನ ಕೊನೆಯ ಅಧ್ಯಾಯ. ಆಯಕಟ್ಟಿನ ಟೈಗರ್ಹಿಲ್ಸ್ ಶತ್ರುಗಳ ವಶದಲ್ಲಿತ್ತು. ಅದನ್ನು ಹೇಗಾದರೂ ವೈರಿಗಳಿಂದ ಬಿಡಿಸಿಕೊಳ್ಳಬೇಕಾಗಿತ್ತು. ಆದರೆ ಅದೇನು ಅಷ್ಟು ಸುಲಭವೇ? ದುರ್ಗಮ ಶಿಖರ. ಕಡಿದಾದ ಹಾದಿ. ಶಿಖರದೆತ್ತರದಲ್ಲಿ ಬಂಕರ್ಗಳಲ್ಲಿ ಮದ್ದುಗುಂಡು ತುಂಬಿಕೊಂಡು ಕಾದಿರುವ ವೈರಿಪಡೆ. ವೈರಿಪಡೆಯ ಈ ದುರ್ಗಮ ಅಡಗುದಾಣ ಅರಸಿ ಹೊರಟ ಸಿಪಾಯಿ ಜಸ್ವಿಂದರ್ ಸಿಂಗ್ ಕೊನೆಗೂ ಮೇಲಕ್ಕೆ ತಲುಪಿದ. ಟೈಗರ್ ಶಿಖರವೇರಿದ. ಅಷ್ಟರಲ್ಲಿ ಆತನ ಎರಡೂ ತೊಡೆಗಳಿಗೆ ಎಲ್ಲಿಂದಲೋ ಗುಂಡುಗಳು ಬಂದು ಬಡಿದವು. ತೊಡೆಗಳು ಛಿದ್ರಛಿದ್ರ. ಆದರೆ ಮನಸ್ಸು ಮಾತ್ರ ಇನ್ನೂ ಭದ್ರ. ಕೊನೆಯುಸಿರಿನವರೆಗೂ ಕೈಯಲ್ಲಿದ್ದ ಬಂದೂಕು ವೈರಿಪಡೆಯ ಮೇಲೆ ಬೆಂಕಿ ಕಾರುತ್ತಲೇ ಇತ್ತು.
ಗುರುದಯಾಲ್ ಕೌರ್ ಮನೆಯಲ್ಲಿ ಟಿವಿ ಮುಂದೆ ಕುಳಿತಿದ್ದಳು. ಕಾರ್ಗಿಲ್ ಕದನದ ಸುದ್ದಿಗಳನ್ನು ಕಾತರದಿಂದ ಆಲಿಸುತ್ತಿದ್ದಳು. ತನ್ನ ಪತಿ ಸಿಪಾಯಿ ಜಸ್ವಿಂದರ್ ಸಿಂಗ್ ಬಗ್ಗೆ ಏನಾದರೂ ಸುದ್ಧಿ, ಚಿತ್ರ ಬರುವದೋ ಎಂದು ಕಾಯುತ್ತಿದ್ದಳು. ಅವಳ ನಿರೀಕ್ಷೆ ಸುಳ್ಳಾಗಲಿಲ್ಲ. ಒಂದೆರಡು ದಿನದಲ್ಲೇ ಜಸ್ವಿಂದರ್ ಸಿಂಗ್ಮನೆಯಂಗಳಕ್ಕೆ ಬಂದಿಳಿದ. ಆದರೆ ಶವವಾಗಿ ಪೆಟ್ಟಿಗೆಯೊಂದರಲ್ಲಿ ಮಲಗಿ. ಪಂಜಾಬಿನ ಧೂಳುತುಂಬಿದ ಹಳ್ಳಿ ಮುನ್ನೆಯ ಆ ಸಣ್ಣ ಮನೆಯಂಗಳದಲ್ಲಿ ಕುಳಿತು ಆಗಸದತ್ತ ದೃಷ್ತಿ ನೆಟ್ಟಿರುವ ಕೌರ್ ಈಗ ಮ್ಲಾನವದನೆ.
ಜಸ್ವಿಂದರ್ ಸಿಂಗ್ ವೀರಮರಣ ಅಪ್ಪಿದ್ದಕ್ಕೆ ತಂದೆಗೆ ದುಃಖವಿಲ್ಲ. "ಶತ್ರುವಪಡೆಯನ್ನು ಹಿಮ್ಮೆಟ್ಟಿಸಲು ಯಾರಾದರೂ ಹೋರಾಡುತ್ತಾ ಸಾಯಲೇಬೇಕು." ಎಂದು ತಮ್ಮಷ್ಟಕ್ಕೆ ಹೇಳಿಕೊಳ್ಳುತ್ತಾರೇ.
"ನಮ್ಮ ಬದುಕಿಗೆ ಇದೊಂದು ಬರಸಿಡಿಲಿನಂತೆ ಬಂದಪ್ಪಳಿಸಿದ ದುರಂತ. ಆದರಿದು ದೇಶಕ್ಕೆ ಉತ್ತಮ ಭವಿಷ್ಯ ತಂದುಕೊಡಬಹುದೇನೋ. ಅದೇ ನಮಗೆ ಈಗುಳಿದಿರುವ ಸಮಾಧಾನ." - ದಾಂಪತ್ಯದ ಸವಿಯನ್ನೇ ಉಣ್ಣದ ಕೌರ್ ಉಮ್ಮಳಿಸಿ ಬರುವ ದುಃಖವನ್ನು ತಡೆದೊತ್ತಿ ಹೇಳುತ್ತಾಳೆ.
ಹೌದು, ಜಸ್ವಿಂದರ್ ಸಿಂಗ್ನ ಸಾವು ವ್ಯರ್ಥವಾಗುವದಿಲ್ಲ.
ಕಾರ್ಗಿಲ್ ಕದನ : ಕೆಲವು ವಿವರಗಳು
ಕಾಲಮಿತಿ :
ಯುದ್ಧ ನಡೆದ ಒಟ್ಟು ಅವಧಿ : ೭೪ ದಿನಗಳು
ಯುದ್ಧಕ್ಷೇತ್ರದ ಒಟ್ಟು ಅವಧಿ : ೧೫೦ ಕಿ.ಮೀ.
ಬಳಸಿದ ಬಲಾಬಲ
ಭಾರತೀಯ ಸೇನೆ : ೨೦,೦೦೦
ಪಾಕಿಸ್ತಾನಿ ಸೇನೆ : ಅಘೋಷಿತ
ಅತಿಕ್ರಮಣಕಾರಿಗಳು : ೧೫೦೦
ಶಸ್ತ್ರಾಸ್ತ್ರ ಬಳಕೆ
ಆರ್ಟಿಲರಿ : ೩೦೦ (೧೦೦ ಬೊಫೋರ್ಸ್ ಬಂದೂಕುಗಳೂ ಸೇರಿದಂತೆ)
ಶೆಲ್‍ಗಳು (ಪ್ರತಿನಿತ್ಯ) : ೫,೦೦೦
ಟೋನೇಜ್ (ಪ್ರತಿನಿತ್ಯ) : ೧೫,೦೦೦
ವಾಯುಬಲ
ಸ್ಟ್ರೈಕ್ ಮಿಶನ್ಸ್ : ೫೫೦
ರೆಕನೈಸಾನ್ಸ್ : ೧೫೦
ಎಸ್ಕಾರ್ಟ್ ಮಿಶನ್ : ೫೦೦
ಚಾಪರ್ ಸಾರ್ಟೀಸ್ : ೨,೧೮೫
ಮಡಿದವರು
ಭಾರತಸೇನೆ : ೪೦೭
ಗಾಯಗೊಂಡವರು : ೫೮೪
ನಾಪತ್ತೆಯಾದವರು : ೬
ಪಾಕ್ ಸೇನೆ ಮಡಿದವರು : ೬೯೬
ಯುದ್ಧ ವೆಚ್ಚ
ದೈನಂದಿನ ಸರಾಸರಿ ವೆಚ್ಚ : ೧೫ ಕೋಟಿ ರೂ.
ಒಟ್ಟು ವೆಚ್ಚ : ೧,೧೦೦ ಕೋಟಿ ರೂ.
ಕಾರ್ಗಿಲ್ ಕದನದಲ್ಲಿ ಹುತಾತ್ಮರಾದ ಕನ್ನಡದ ಕೆಲವರು ಕಡುಗಲಿಗಳು
*ಭಾರತೀಯ ವಾಯುಪಡೆಯ ಪ್ಲೈಟ್ ಲೆಫ್ಟಿನೆಂಟ್ ಎಂ.ಸುಬ್ರಹ್ಮಣ್ಯಂ (ಬೆಳಗಾವಿ)
* ಮಡಿವಾಳಪ್ಪ ನಾಯ್ಕರ್ (ಆಸುಂಡಿ ಗ್ರಾಮ, ಸವದತ್ತಿ ತಾಲೂಕು, ಬೆಳಗಾವಿ)
* ಸಿಪಾಯಿ ಧೋಂಡಿಬಾ ದೇಸಾಯಿ (ವಡಗಾಂವ, ಖಾನಾಪುರ, ತಾಲೂಕು, ಬೆಳಗಾವಿ)
ಸಿದ್ಧನಗೌಡ ಬಸನಗೌಡ ಪಾಟೀಲ, ಸಿ.ಆರ್.ಪಿ.ಎಫ್. (ಕೆರೂರು ಗ್ರಾಮ, ಚಿಕ್ಕೋಡಿ ತಾಲೂಕು, ಬೆಳಗಾವಿ ಜಿಲ್ಲೆ)
* ಅಪ್ಪಾಸಾಹೇಬ ಪೀರಪ್ಪ ಧನವಾಡೆ, ಸಿ.ಆರ್.ಪಿ.ಎಫ್. (ಇಂಗಳಿ ಗ್ರಾಮ, ಚಿಕ್ಕೋಡಿ ತಾಲೂಕು, ಬೆಳಗಾವಿ)
* ನಾಯಕ ಶಿವಬಸಯ್ಯ ಕುಲಕರ್ಣಿ, ೨೦ನೆಯ ರಾಷ್ಟ್ರೀಯ ರೈಫಲ್ಸ್ (ಚೊಳಚಗುಡ್ಡ ಗ್ರಾಮ, ಬಾದಾಮಿ, ಬಾಗಲಕೋಟ ಜಿಲ್ಲೆ)
* ಸಿದ್ಧರಾಮಪ್ಪ (ರೇಕುಳಿ ಗ್ರಾಮ, ಬೀದರ್ ಜಿಲ್ಲೆ)
* ಲ್ಯಾನ್ಸ್ ಹವಿಲ್ದಾರ್ ಮಲ್ಲಯ್ಯ ಚನ್ನಬಸಯ್ಯ ಮೇಗಳಮಠ (ಅಳವಂಡಿ ಗ್ರಾಮ, ಕೊಪ್ಪಳ ತಾಲ್ಲೂಕು, ಕೊಪ್ಪಳ ಜಿಲ್ಲೆ)
* ಎಸ್.ಕೆ.ಮೇದಪ್ಪ, ಮರಾಠಾ ಲೈಟ್ ಇನ್‍ಫೆಂಟ್ರಿ (ಕಿರಂಗನದೂರು, ಸೋಮವಾರಪೇಟೆ ತಾಲೂಕು, ಕೊಡಗು ಜಿಲ್ಲೆ)
* ದಾವಲಸಾಬ್ ಅಲಿಸಾಬ್ ಕಂಬಾರ್, ಬಿ.ಎಸ್.ಎಫ್. (ಬಲವಟ್ ಗ್ರಾಮ, ಮುದ್ದೇಬಿಹಾಳ ತಾಲೂಕು, ಬಿಜಾಪುರ)
* ಸುಬೇದಾರ್ ಪೆಮ್ಮಂಡ ದೇವಯ್ಯ ಕಾವೇರಪ್ಪ (ವಿರಾಜಪೇಟೆ, ಕೊಡಗು ಜಿಲ್ಲೆ)
* ಲಾನ್ಸ್ ನಾಯಕ್ ಎಚ್.ವಿ.ವೆಂಕಟ್ (ಅಗ್ರಹಾರ ಗ್ರಾಮ, ಅರಕಲಗೂಡು ತಾಲೂಕು, ಹಾಸನ ಜಿಲ್ಲೆ)
* ಲಾನ್ಸ್ ನಾಯಕ್ ಯಶವಂತ ಕೋಲಕಾರ (ಮೇಕಲಮರಡಿ ಗ್ರಾಮ, ಬೈಲಹೊಂಗಲ ತಾಲೂಕು, ಬೆಳಗಾವಿ ಜಿಲ್ಲೆ)
* ದಿಲೀಪ ಪೀರಪ್ಪ ಪೋತ್ರಾಜ (ಗದ್ಯಾಳ ಗ್ರಾಮ, ಜಮಖಂಡಿ ತಾಲೂಕು, ಬಿಜಾಪುರ ಜಿಲ್ಲೆ)
* ಗೋವಿಂದ ಶೆಡೋಳೆ (ವರದಟ್ಟಿ ಗ್ರಾಮ, ಭಾಲ್ಕಿ ತಾಲೂಕು, ಬೀದರ ಜಿಲ್ಲೆ)
ಯುವರಾಜ ನಂದಿ.


Tuesday, 16 July 2019

ಗುರು ಪೂರ್ಣಿಮಾ

ಹಿಂದೂ ಪಂಚಾಂಗದ ಆಷಾಢ ಮಾಸದ ಹುಣ್ಣಿಮೆಯನ್ನು ಹಿಂದೂಗಳು ಸಾಂಪ್ರದಾಯಿಕವಾಗಿ ಗುರು ಪೂರ್ಣಿಮೆ ಎಂದು ಆಚರಿಸುತ್ತಾರೆ.

ಈ ದಿನದಂದು, ಹಿಂದೂಗಳು ಮತ್ತು ಬೌದ್ಧರು ತಮ್ಮ ಗುರುವಿಗೆ ಪೂಜೆ ಸಲ್ಲಿಸುತ್ತಾರೆ. ಗುರುಪೂರ್ಣಿಮೆಯ ದಿನ ಗುರು ಸೂತ್ರದ ಪ್ರಭಾವ ಬೇರೆ ದಿನಗಳಿಗಿಂತ ಸಾವಿರ ಪಟ್ಟು ಹೆಚ್ಚು ಪ್ರಭಾವಶಾಲಿಯಾಗಿರುತ್ತದೆ. ಗುರು ಅನ್ನುವ ಶಬ್ದ ಗು ಮತ್ತು ರು ಅನ್ನುವ ಮೂಲ ಪದಗಳನ್ನು ಹೊಂದಿದೆ. ಸಂಸ್ಕೃತ ಭಾಷೆಯಲ್ಲಿ ಗು ಅಂದರೆ ಅಂಧಕಾರ ಅಥವಾ ಅಜ್ಞಾನ. ರು ಅಂದರೆ ಕಳೆಯುವ ಅಥವಾ ದೂರ ಮಾಡುವ ಎಂದರ್ಥ. ಅದಕ್ಕೆ ಗುರು ಅಂದರೆ ಅಂಧಕಾರ ಅಥವಾ ಅಜ್ಞಾನವನ್ನು ದೂರ ಮಾಡುವವರು ಎಂದರ್ಥ. ಬಹುತೇಕ ಜನರು ಗುರುವನ್ನು ತಮ್ಮ ಜೀವನದ ಅವಿಭಾಜ್ಯ ಅಂಗವಾಗಿ ಪರಿಗಣಿಸುತ್ತಾರೆ.

ಗುರುಪೂರ್ಣಿಮೆಗೆ ಧಾರ್ಮಿಕ ಪ್ರಾಮುಖ್ಯತೆ ಅಲ್ಲದೆ ಶೈಕ್ಷಣಿಕ ಮತ್ತು ವಿದ್ವಾಂಸರ ವೃಂದದಲ್ಲೂ ಮಹತ್ವ ಇದೆ. ಈ ದಿನ ಶೈಕ್ಷಣಿಕ ವೃಂದದವರು ತಮ್ಮ ಶಿಕ್ಷಕರಿಗೆ ಕೃತಜ್ಞತೆ ಸಲ್ಲಿಸುವ ಮೂಲಕ ಮತ್ತು ತಮ್ಮ ಭಾವಿ ಶಿಕ್ಷಕರನ್ನು ಮತ್ತು ವಿದ್ವಾಂಸರನ್ನು ಸ್ಮರಿಸುವ ಮೂಲಕ ಆಚರಿಸುತ್ತಾರೆ.

ಬೌದ್ಧರು ಸಾಂಪ್ರದಾಯಿಕವಾಗಿ ಈ ಹಬ್ಬವನ್ನು ಗೌತಮ ಬುದ್ಧನ ಪ್ರಥಮ ಧರ್ಮೋಪದೇಶದ ಅಂಗವಾಗಿ ಆಚರಿಸುತ್ತಾರೆ. ಈ ದಿನ ಗೌತಮ ಬುದ್ಧನು ಉತ್ತರ ಪ್ರದೇಶದ ಸಾರನಾಥದಲ್ಲಿ ತನ್ನ ಪ್ರಥಮ ಧರ್ಮೋಪದೇಶ ನೀಡಿದ. ಯೋಗ ಸಂಪ್ರದಾಯದಲ್ಲಿ ಈ ದಿನವನ್ನು ಶಿವನು ಸಪ್ತರ್ಷಿಗಳಿಗೆ ಯೋಗ ವಿದ್ಯೆಯನ್ನು ಧಾರೆಯೆರೆದು ಪ್ರಥಮ ಗುರು ಆದ ದಿನ ಎಂಬ ನಂಬಿಕೆಯಿಂದ ಆಚರಿಸುತ್ತಾರೆ. ಹಲವಾರು ಹಿಂದೂಗಳು, ಹಿಂದೂ ಪರಂಪರೆಯ ಶ್ರೇಷ್ಠ ಗುರುಗಳಲ್ಲಿ ಒಬ್ಬರಾದ ವೇದವ್ಯಾಸ ಮಹರ್ಷಿಗಳ ಜನ್ಮದಿನದ ಅಂಗವಾಗಿ ಈ ಹಬ್ಬವನ್ನು ಆಚರಿಸುತ್ತಾರೆ. ವೇದವ್ಯಾಸ ಮಹರ್ಷಿಗಳು ಈ ದಿನ ಹುಟ್ಟಿದ್ದಲ್ಲದೇ ಆಷಾಢ ಶುಕ್ಲ ಪಕ್ಷದ ಪ್ರಾರಂಭದಿಂದ ಬ್ರಹ್ಮಸೂತ್ರಗಳ ರಚನೆ ಪ್ರಾರಂಭಿಸಿದರು. ಈ ದಿನ ಆ ಶುಕ್ಲ ಪಕ್ಷ ಕೊನೆಗೊಳ್ಳುತ್ತದೆ. ಇದರ ಸ್ಮರಣಾರ್ಥಕವಾಗಿ ಈ ದಿನದಂದು ಬ್ರಹ್ಮಸೂತ್ರಗಳ ಪಠಣ ಮಾಡಲಾಗುತ್ತದೆ ಹಾಗೂ ಈ ದಿನವನ್ನು ವ್ಯಾಸ ಪೂರ್ಣಿಮಾ ಎಂದೂ ಕರೆಯುತ್ತಾರೆ. ಹಿಂದೂ ಧರ್ಮದ ಎಲ್ಲ ಅಧ್ಯಾತ್ಮಿಕ ಪರಂಪರೆಗಳಲ್ಲಿಯೂ ತಮ್ಮ ಗುರುಗಳಿಗೆ ಕೃತಜ್ಞತೆ ಸಲ್ಲಿಸುತ್ತ ಈ ಹಬ್ಬವನ್ನು ಅತ್ಯಂತ ಶ್ರದ್ಧೆ ಭಕ್ತಿಯಿಂದ ಆಚರಿಸಲಾಗುತ್ತದೆ. ಮಳೆಗಾಲದ ನಾಲ್ಕು ತಿಂಗಳುಗಳಾದ ಚಾತುರ್ಮಾಸದಲ್ಲಿ ಬರುವ ಈ ಗುರುಪುರ್ಣಿಮೆಯಂದು ಸನ್ಯಾಸಿಗಳು ತಮ್ಮ ಗುರುಗಳಿಗೆ ಪೂಜೆ ಸಲ್ಲಿಸುತ್ತಾರೆ. ಈ ಚಾತುರ್ಮಾಸದಲ್ಲಿ ಸನ್ಯಾಸಿಗಳು ಸಾಮಾನ್ಯವಾಗಿ ಒಂದೇ ಸ್ಥಳದಲ್ಲಿ ಇದ್ದು, ಭಕ್ತಾದಿಗಳಿಗೆ ಪ್ರವಚನಗಳನ್ನು ನೀಡುತ್ತಾರೆ. ಭಾರತ ಶಾಸ್ತ್ರೀಯ ಸಂಗೀತವು ಗುರು ಶಿಷ್ಯ ಪರಂಪರೆ ಪಾಲಿಸುವುದರಿಂದ, ವಿಶ್ವಾದ್ಯಂತ ಅದರ ವಿದ್ಯಾರ್ಥಿಗಳು ಈ ಹಬ್ಬವನ್ನು ಆಚರಿಸುತ್ತಾರೆ.

ಹಿಂದೂ ಪುರಾಣ
ಇದೇ ದಿನ ಮಹಾಭಾರತದ ಕರ್ತೃರಾದ ವೇದವ್ಯಾಸರು, ಪರಾಶರ ಋಷಿಗಳು ಹಾಗೂ ಒಬ್ಬ ಮೀನುಗಾರನ ಮಗಳಾದ ಸತ್ಯವತಿಗೆ ಜನ್ಮಿಸಿದರು. ವೇದವ್ಯಾಸರು ತಮ್ಮ ಕಾಲದಲ್ಲಿ ಅಸ್ತಿತ್ವದಲ್ಲಿದ್ದ ಎಲ್ಲ ವೈದಿಕ ಋಕ್ಕುಗಳನ್ನು ಸಂಗ್ರಹಿಸಿ, ಯಜ್ಞ ಯಾಗಾದಿ ಧಾರ್ಮಿಕ ವಿಧಿಗಳಲ್ಲಿ ಅವುಗಳ ಬಳಕೆಯೆ ಆಧಾರದ ಮೇಲೆ ಋಗ್ವೇದ, ಯಜುರ್ವೇದ, ಸಾಮವೇದ ಮತ್ತು ಅಥರ್ವವೇದ ಎಂಬ ನಾಲ್ಕು ಭಾಗಗಳನ್ನಾಗಿ ವಿಭಾಗಿಸಿ, ಅವುಗಳನ್ನು ತಮ್ಮ ನಾಲ್ಕು ಮುಖ್ಯ ಶಿಷ್ಯರಾದ ಸುಮಂತು, ವೈಶಂಪಾಯನ, ಜೈಮಿನಿ ಹಾಗೂ ಪೈಲರಿಗೆ ಬೋಧಿಸುವ ಮೂಲಕ ವೈದಿಕ ಅಧ್ಯಯನಗಳ ಉದ್ದೇಶಕ್ಕಾಗಿ ಮಹತ್ತರವಾದ ಸೇವೆಮಾಡಿದರು. ಈ ವಿಭಜನೆ ಮತ್ತು ಸಂಪಾದನೆಯನ್ನು ಮಾಡಿದ್ದಕ್ಕಾಗಿ ಅವರಿಗೆ ವ್ಯಾಸ (ವ್ಯಾಸ = ಸಂಪಾದಿಸು, ವಿಭಾಗಿಸು) ಎಂಬ ಗೌರವ ನಾಮ ದೊರೆಯಿತು.

ಯುವರಾಜ ನಂದಿ



Tuesday, 11 June 2019

ಜ್ಞಾನೋದಯ

ಜ್ಞಾನೋದಯ ಆಗುವುದು ಅಂದರೇನು? ಜ್ಞಾನೋದಯ ಯಾಕೆ ಆಗಬೇಕು? ಜ್ಞಾನೋದಯ ಆದ ತಕ್ಪಣ ಏನೇನು ಬದಲಾವಣೆ ಆಗುತ್ತದೆ?

Tuesday, 28 May 2019

ವಿಶ್ವಾಸ ದೇವರಂತೆ ಬದುಕಿಗಿಂತ ಬಲು ದೊಡ್ಡದು.

ಒಮ್ಮೆ ಶ್ರೀಕೃಷ್ಣ ಪಾಂಡವರನ್ನು ನೋಡಲು ಬಂದಿದ್ದ...
ಪಾಂಡವರು ವನವಾಸದಲ್ಲಿದ್ದರು.
ಮಧ್ಯಾಹ್ನ ಭೋಜನದ ಸಮಯವಾದರೂ
ಧರ್ಮರಾಜ ಕುಟೀರಕ್ಕೆ ಬಂದಿರಲಿಲ್ಲ. ಎಲ್ಲಿ
ಹುಡುಕಿದರೂ ಧರ್ಮರಾಜ ಸಿಗಲಿಲ್ಲ. ಯಾರೋ ಹೇಳಿದರು..
"ಇಲ್ಲೇ ಪಕ್ಕದಲ್ಲಿ
ಒಂದು ಅಜ್ಜಿಯ ಗುಡಿಸಲು ಇದೆ. ಅಲ್ಲಿ ಧರ್ಮರಾಜ ಇದ್ದಾನೆ..."
ಪಾಂಡವರು
ಶ್ರೀಕೃಷ್ಣನ ಜೊತೆಗೂಡಿ ಅಜ್ಜಿಯ ಗುಡಿಸಲಿಗೆ ಬಂದರು... ಎಲ್ಲರಿಗೂ ಆಶ್ಚರ್ಯ.. ! ಧರ್ಮರಾಜ
ಅಜ್ಜಿಗಾಗಿ ಕಟ್ಟಿಗೆ ಹೊರೆಯನ್ನು ಹೊತ್ತುಕೊಂಡು ಬಂದು
ಗುಡಿಸಲ ಪಕ್ಕದಲ್ಲಿ ಸಂಗ್ರಹಿಸಿಡುತ್ತಿದ್ದಾನೆ !
ಕೃಷ್ಣ ಕುತೂಹಲದಿಂದ ಕೇಳಿದ..
"ಧರ್ಮಜಾ...
ಇದೇನಿದು ಕಟ್ಟಿಗೆ ಹೊರೆಯನ್ನು ಹೊರುತ್ತಿದ್ದೀಯಾ ?..."
ಧರ್ಮರಾಜ
ಬೆವರು ಒರೆಸಿಕೊಳ್ಳುತ್ತ ಹೇಳಿದ...
"ಮಾಧವಾ..
ಈ ಅಜ್ಜಿ ಇಲ್ಲಿ ಒಬ್ಬಳೇ ಇರುತ್ತಾಳೆ. ಇಂದು
ಬೆಳಿಗ್ಗೆ ಕಟ್ಟಿಗೆ ಹೊರೆಯನ್ನು ತನ್ನ ತಲೆಯ ಮೇಲೆ
ಇಟ್ಟುಕೊಳ್ಳಲಾಗದೆ ಕಷ್ಟಪಡುತ್ತಿದ್ದಳು. ನನಗೆ ನೋಡಲಾಗಲಿಲ್ಲ.ಸಹಾಯ ಮಾಡುತ್ತಿದ್ದೇನೆ..."
ಕೃಷ್ಣ ಮತ್ತೆ ಕೇಳಿದ."ಧರ್ಮಜಾ...
ಕಟ್ಟಿಗೆ ಹೊರೆಯನ್ನು
ಅಜ್ಜಿಯ ತಲೆಯ ಮೇಲೆ ಇಟ್ಟಿದರೆ ನಿನ್ನ ಕರ್ತವ್ಯ ಮುಗಿಯುತ್ತಿತ್ತು. ಅಥವಾ ಆ ಹೊರೆಯನ್ನು ಅವಳ ಗುಡಿಸಲಿಗೆ ತಂದುಕೊಟ್ಟರೆ ಸಾಕಾಗಿತ್ತು.ದಿನಾಪೂರ್ತಿ ಕಟ್ಟಿಗೆ ಹೊರೆಯನ್ನು ಹೊರುವ ಅಗತ್ಯವೇನಿತ್ತು ಧರ್ಮಜಾ ?.."..
ಧರ್ಮರಾಜ
ಮತ್ತೊಮ್ಮೆ ಬೆವರನ್ನು ಒರೆಸಿಕೊಂಡ..
"ಕೃಷ್ಣಾ...
ಲೋಕನೀತಿಯಲ್ಲಿ ನೀನು ಹೇಳುತ್ತಿರುವದು ಸರಿ. ವಿಷಯ ಅದಲ್ಲ...ಇಲ್ಲಿ ಅಜ್ಜಿಗೆ
ಸಹಾಯ ಮಾಡುವದರ ಹಿಂದೆ ನನ್ನ ಸ್ವಾರ್ಥವೂ ಇದೆ..." ...
ಪಾಂಡವರಿಗೆಲ್ಲ ಆಶ್ಚರ್ಯವಾಯಿತು...
"ಮಾಧವಾ, ಯಾರಾದರೂ
ಇಂಥಹ
ವಯಸ್ಸಾದವರಿಗೆ
ಸಹಾಯದ ಅವಶ್ಯಕತೆ ನಮಗೆ ಕಾಣಿಸಿದಲ್ಲಿ ಸಹಾಯ ಮಾಡಿಬಿಡಬೇಕು. ನಮ್ಮಿಂದ
ದೂರದಲ್ಲಿರುವ
ನಮ್ಮ ಹೆತ್ತವರಿಗೆ ಅಗತ್ಯವಿರುವಾಗ
ನನ್ನಂತೆ
ಅಲ್ಲೂ ಸಹ ಯಾರಾದರೂ ಸಹಾಯ ಮಾಡಲು ಬರುತ್ತಾರೆ... ಇದು
ನನ್ನ ನಂಬಿಕೆ... ಅದಮ್ಯ ವಿಶ್ವಾಸ....! ನನ್ನ
ತಾಯಿ ಕುಂತಿದೇವಿ ದೂರದ ಹಸ್ತಿನಾವತಿಪುರದಲ್ಲಿದ್ದಾಳೆ.
ಹೆತ್ತವಳಿಗಂತೂ ಸಹಾಯ ಮಾಡಲಾಗುವದಿಲ್ಲ... ಈ ಅಜ್ಜಿಗೆ
ಸಹಾಯ ಮಾಡುವದರಲ್ಲಿ
ನನ್ನ ಸ್ವಾರ್ಥವಿದೆ ಕೃಷ್ಣಾ...ವೃದ್ಯಾಪ್ಯದ
ಅಸಹಾಯಕದಲ್ಲಿರುವ
ನನ್ನಮ್ಮನಿಗೆ ನನ್ನ ಅಗತ್ಯ ಎಷ್ಟಿದೆಯೋ ಗೊತಿಲ್ಲ....
ಈ ಅಜ್ಜಿಯಲ್ಲಿ
ನನ್ನಮ್ಮನನ್ನು ಕಾಣುತ್ತಿದ್ದೆನೆ ಕೃಷ್ಣಾ...." ....
ಶ್ರೀಕೃಷ್ಣ ಮೂಕನಾಗಿದ್ದ...
ಉಳಿದ
ಪಾಂಡವರ ಕಣ್ಣಲ್ಲಿ ನೀರು ಜಿನುಗಿತ್ತು...
ಶ್ರೀಕೃಷ್ಣ
ಧರ್ಮರಾಜನನ್ನು
ಪ್ರೀತಿಯಿಂದ ಆಲಂಗಿಸಿಕೊಂಡ...
ಬದುಕು...ನೌಕರಿ...ಹೋರಾಟ..ಮಕ್ಕಳು.. ಸಂಸಾರ..
ವ್ಯವಹಾರಗಳ ಜಂಜಡದಲ್ಲಿ
ನಮ್ಮ ಹೆತ್ತವರ ಜೊತೆಯಾಗಿ ಇರಲು ಸಾಧ್ಯವಾಗುವದಿಲ್ಲ...
ನಮ್ಮ
ಅಕ್ಕಪಕ್ಕದಲ್ಲಿ..
ರಸ್ತೆಯಲ್ಲಿ ಹೋಗುವಾಗ ...
ಯಾರಾದರೂ
ವೃದ್ಧರು ...
ಅಸಹಾಯಕರು ಕಂಡಲ್ಲಿ..
ಅವರಿಗೆ ಸಹಾಯದ ಅವಶ್ಯಕತೆ ಇದ್ದಲ್ಲಿ
ಖಂಡಿತ ಹೋಗಿ ಮಾಡಬೇಕು...
ಅಗತ್ಯವಿರುವವರಿಗೆ
ಸಹಾಯ ಮಾಡುವದು ಪುಣ್ಯದ ಕೆಲಸ..
ಸಹಾಯ ಮಾಡುವ ಸಂದರ್ಭ ಎಲ್ಲರಿಗೂ ಸಿಗುವದಿಲ್ಲ...
ಭಾಗ್ಯವಂತರಿಗೆ ಮಾತ್ರ ಸಹಾಯ ಮಾಡುವ ಸಂದರ್ಭ ಸಿಗುತ್ತದೆ..
ಹೆತ್ತವರನ್ನು
ನೆನಪಿಸಿಕೊಂಡು ಅಂಥವರಿಗೆ ಸಹಾಯ ಮಾಡಬೇಕು...
ದೂರದಲ್ಲಿರುವ
ನಮ್ಮ ಹೆತ್ತವರಿಗೆ ಯಾರೋ ಪುಣ್ಯಾತ್ಮರು ಸಹಾಯ ಮಾಡಿರುತ್ತಾರೆ...
ನಂಬಿಕೆ
ವಿಶ್ವಾಸ ದೇವರಂತೆ ಬದುಕಿಗಿಂತ ಬಲು ದೊಡ್ಡದು...

ಯುವರಾಜ ನಂದಿ 

Wednesday, 8 May 2019



ಕಲ್ಪನಾ ಲೋಕ

ಕಲ್ಪನಾ ಲೋಕದಿಂದ ಹೊರ ಬಂದೆ ವಾಸ್ತವವನ್ನು ಒಪ್ಪಿಕೊಂಡೆ
ಕೆಲವೊಮ್ಮೆ ನಾವು ಇಷ್ಟ ಪಟ್ಟ ಎಲ್ಲ ವಸ್ತುಗಳು ನಮ್ಮದಾಗುವುದಿಲ್ಲ
ಕೆಲವೊಮ್ಮೆ ನಾವು ಕಂಡಂತೆ ಎಷ್ಟೋ ಕನಸುಗಳೆಲ್ಲ ನಾವು ಊಹಿಸಿದಂತೆ ನನಸಾಗುವುದಿಲ್ಲ
ಕೆಲವೊಮ್ಮೆ ನಮ್ಮಲ್ಲಿ ಎಷ್ಟೇ ನೋವಿದ್ದರೂ ಸಹ ಅದನ್ನು ಬದಿಗಿಟ್ಟು ಸಹಜವಾಗಿ ವರ್ತಿಸಬೇಕಾಗುತ್ತೆ
ಅದು ಕೂಡ ಮತ್ತೊಬ್ಬರ ಮುಖದಲ್ಲಿ ನಗುವನ್ನು ನೋಡಲು
ಕೆಲವೊಮ್ಮೆ ಗೆಲ್ಲುತ್ತೇವೆ ಕೆಲವೊಮ್ಮೆ ಕಲಿಯುತ್ತೇವೆ
ಆದರೆ ಒಂದು ವಿಷಯ ನೆನಪಿನಲ್ಲಿಟ್ಟಕೊಂಡಿದೀನಿ ವಾಸ್ತವವನ್ನು ಒಪ್ಪಿಕೊಂಡು ನಮ್ಮವರು ಅನಕೊಂಡವರೆಲ್ಲ ಕೊನೆವರೆಗೂ ನಮ್ಮ ಜೊತೆ ಇರುವದಿಲ್ಲ ಅನ್ನೋ ಅರ್ಥ ನಿಜವಾಯಿತು
ಕಲ್ಪನಾ ಲೋಕದಿಂದ ಹೊರ ಬಂದೆ ವಾಸ್ತವವನ್ನು ಒಪ್ಪಿಕೊಂಡೆ.

ಯುವರಾಜ ನಂದಿ



Wednesday, 17 April 2019

ಆತ್ಮದೀಪ

ಮಣ್ಣಿನಿಂದ ಮಾಡಿದ ಸಣ್ಣದೊಂದು ಹಣತೆ ನಾನು
ನನಗಿಲ್ಲ ನನ್ನನ್ನು ಕುರಿತು ಎಳ್ಳಷ್ಟೂ ಪ್ರೀತಿ 
ಜಗತ್ತು ಎಲ್ಲಿಯವರೆಗೂ ಬಯಸುತ್ತದೋ ಜ್ಯೋತಿ
ನನ್ನಿಂದ, ಉರಿಯುತ್ತಾ  ಕೊಡಲು ಸಿದ್ಧನಾಗಿಹೆನು 

ಆದರೆ ನನ್ನ ಬೆಳಕಿನಿಂದ ಏನಾದರೂ 
ಕೋರೈಸಿದರೆ ನಿದ್ರಿಸಿದ ಜಗದ ಕಣ್ಣು 
ನಂದಿಸಿಬಿಡಲಿ ಬೇಕಾದರೆ ನನ್ನನ್ನು 
ನಂದಲು ನನ್ನದೇನೂ ಇಲ್ಲ ತಕರಾರು 

ತಿಳಿದುಕೊಳ್ಳಲಿ ಇಷ್ಟನ್ನು ಮಾತ್ರ ನನ್ನನ್ನು ಕುರಿತು ಜಗತ್ತು:
ಮಣ್ಣಿನ ದೀಪವಾದರೂ ನಾನು ಭಿನ್ನ 
ಪ್ರಕೃತಿಯು ಹಾಗೆ ಸೃಷ್ಟಿಸಿದೆ ನನ್ನನ್ನ 
ಜೀವಂತ ಹಣತೆಯು ನಾನು, ಅಭಿಮಾನ ನನ್ನಲ್ಲಿ ತುಂಬಿರುವುದು 

ನಂದಿಸಲು ನನ್ನನ್ನು ಕೈ ಮುಂದೆ ಮಾಡುವ ಮುನ್ನ 
ಯೋಚಿಸಲಿ ಜಗತ್ತು ಒಂದಲ್ಲ ಹತ್ತು ಸಲ 
ಪಶ್ಚಾತ್ತಾಪ ಪಡಬಾರದಲ್ಲ ಅನಂತರ 
ನಂದಿಸಿದ ನಂತರ ಹಚ್ಚಲಾಗದು ನನ್ನನ್ನು ಪುನಃ

ಯಲ್ಲಪ್ಪ ನಂದಿ.

Thursday, 10 January 2019

ಸ್ವಾಮಿ ವಿವೇಕಾನಂದ ಜನ್ಮ ದಿನ "ರಾಷ್ಟ್ರೀಯ ಯುವ ದಿನ" ಜನವರಿ ೧೨

ಸ್ವಾಮಿ ವಿವೇಕಾನಂದ

ಸ್ವಾಮಿ ವಿವೇಕಾನಂದ (ನರೇಂದ್ರನಾಥ ದತ್ತ) (ಜನವರಿ ೧೨, ೧೮೬೩ - ಜುಲೈ ೪, ೧೯೦೨) ಭಾರತದಅತ್ಯಂತ ಪ್ರಸಿದ್ಧ ಮತ್ತು ಪ್ರಭಾವಶಾಲಿ ತತ್ತ್ವಜ್ಞಾನಿಗಳಲ್ಲಿ ಒಬ್ಬರು. ನಿರ್ಭಯತೆ, ಆಶಾವಾದ ಮತ್ತು ಸಾಮಾಜಿಕ ಸಮಸ್ಯೆಗಳ ಬಗೆಗಿನ ವಿಶಾಲ ದೃಷ್ಟಿಯ ಸಂಕೇತವಾಗಿ ಅವರು ಪರಿಗಣಿತರಾಗಿದ್ದಾರೆ. ಸ್ವಾಮಿ ವಿವೇಕಾನಂದರ ಜನ್ಮ ದಿನವಾದ ಜನವರಿ ೧೨ ರಂದು ರಾಷ್ಟ್ರೀಯ "ಯುವದಿನ"ವೆಂದು ಆಚರಿಸಲಾಗುತ್ತದೆ.

ಜನನ

ವಿವೇಕಾನಂದರ ಪೂರ್ವದ ಹೆಸರು ನರೇಂದ್ರನಾಥ ದತ್ತ. ಇವರು ೧೮೬೩, ಜನವರಿ ೧೨ರಂದು ಕಲ್ಕತ್ತೆಯಲ್ಲಿ ಜನಿಸಿದರು. ತಂದೆ ವಿಶ್ವನಾಥ ದತ್ತ. ತಾಯಿ ಭುವನೇಶ್ವರಿ ದೇವಿ. ಶ್ರೀ ರಾಮಕೃಷ್ಣ ಪರಮಹಂಸರ ಶಿಷ್ಯರಾದ ಮೇಲೆ 'ವಿವೇಕಾನಂದ' ಎಂಬ ಹೆಸರನ್ನು ಪಡೆದರು. ಕಲ್ಕತ್ತೆಯ ಸ್ಕಾಟಿಷ್ ಚರ್ಚ್ ಕಾಲೇಜಿನಲ್ಲಿ ತತ್ತ್ವಶಾಸ್ತ್ರ ಅಧ್ಯಯನ ಮಾಡಿದರು. ‍ ರಾಮಕೃಷ್ಣರ ಜೊತೆಗೆ

ನರೇಂದ್ರರಿಗೆ ರಾಮಕೃಷ್ಣರ ಮೊದಲ ಪರಿಚಯ ವಿಲಿಯಮ್ ಹೆಸ್ಟಿಯವರ ತರಗತಿಯಲ್ಲಿ. ಹೆಸ್ಟಿಯವರು ವಿಲಿಯಮ್ ವರ್ಡ್ಸ್ವವರ್ತ್ ಅವರ "ದ ಎ‍ಕ್ಸಕರ್ಶನ್" ಎಂಬ ಕವಿತೆಯಲ್ಲಿನ "ಸಮಾಧಿ" ಪದವನ್ನು ವಿವರಿಸುವಾಗ ಸಮಾಧಿಯ ನಿಜವಾದ ಅರ್ಥ ತಿಳಿಯಲು ದಕ್ಷಿಣೇಶ್ವರದ ರಾಮಕೃಷ್ಣರನ್ನೊಮ್ಮೆ ಭೇಟಿ ನೀಡಿ ಎಂದು ಸಲಹೆ ಇತ್ತರು. ಇವರ ಸಲಹೆಯ ಮೇರೆಗೆ ಹಲವಾರು ವಿದ್ಯಾರ್ಥಿಗಳು ರಾಮಕೃಷ್ಣರನ್ನು ನೋಡಲು ಉತ್ಸುಕರಾದರು. ಆವರಲ್ಲಿ ನರೇಂದ್ರರೂ ಒಬ್ಬರು.
೧೮೮೧ನೇ ಇಸವಿ ನವೆಂಬರದಲ್ಲಿ ಎಫ್.ಎ(ಲಲಿತಕಲೆ)ಪರೀಕ್ಷೆ ಬರೆಯಲು ತಯಾರಿ ನಡೆಸುತ್ತಿದ್ದಾಗ, ರಾಮಚಂದ್ರದತ್ತರು ರಾಮಕೃಷ್ಣರು ಪ್ರವಚನ ನಡೆಸುತ್ತಿದ್ದರು ಸುರೇಂದ್ರನಾಥ ಮಿತ್ರರ ಮನೆಗೆ ಕರೆದರು. ಅಲ್ಲಿ ರಾಮಕೃಷ್ಣರು ನರೇಂದ್ರನಿಗೆ ಹಾಡಲು ಕೇಳಿಕೊಂಡರು. ಅವರ ಗಾಯನ ಪ್ರತಿಭೆಯನ್ನು ಮೆಚ್ಚಿ ರಾಮಕೃಷ್ಣರು ನರೆಂದ್ರನನ್ನು ದಕ್ಷಿಣೇಶ್ವರಕ್ಕೆ ಬರಲು ಆಮಂತ್ರಿಸಿದರು. ಆದರೆ ನರೇಂದ್ರರು ಅದರ ಬಗ್ಗೆ ಉತ್ಸಾಹ ತೊರಿಸಲಿಲ್ಲ.
೧೮೮೨ ರಲ್ಲಿ ನರೇಂದ್ರರು ತನ್ನ ಇಬ್ಬರು ಗೆಳೆಯರೊಂದಿಗೆ ರಾಮಕೃಷ್ಣರನ್ನು ಭೇಟಿ ಮಾಡಲು ದಕ್ಷಿಣೇಶ್ವರಕ್ಕೆ ಹೋದರು. ರಾಮಕೃಷ್ಣರ ಆ ಭೇಟಿ ಅವರ ಜೀವನಕ್ಕೆ ಮಹತ್ವದ ತಿರುವನ್ನು ಕೊಟ್ಟಿತು. ಆದರೂ ನರೇಂದ್ರರು ರಾಮಕೃಷ್ಣರನ್ನು ಗುರುಗಳನ್ನಾಗಿ ಒಪ್ಪಿಕೊಳ್ಳಲಿಲ್ಲ. ರಾಮಕೃಷ್ಣರ ಆಲೋಚನೆಗಳನ್ನು ಒಪ್ಪಿಕೊಳ್ಳದಿದ್ದರೂ, ಅವರ ಮಗುವಿನಂಥ ವ್ಯಕ್ತಿತ್ವ ಅವರನ್ನು ಪದೇ ಪದೇ ದಕ್ಷಿಣೀಶ್ವರಕ್ಕೆ ಭೇಟಿ ನೀಡಲು ಪ್ರೇರೇಪಿಸಿತು.
ಮೊದಮೊದಲಿಗೆ ರಾಮಕೃಷ್ಣರ ಭಾವಪರವಶತೆಯ ಮತ್ತು ದೂರದೃಷ್ಟಿಯನ್ನು ಕೇವಲ ಕಾಲ್ಪನಿಕ ಬರಿ ಭ್ರಮೆ ಎಂದು ಭಾವಿಸಿದ್ದರು. ೧೮೮೪ ಇಸವಿಯಲ್ಲಿ ಅನಿರೀಕ್ಷಿತವಾಗಿ ನರೇಂದ್ರರ ತಂದೆಯವರು ಇಹಲೋಕ ತ್ಯಜಿಸಿದರು. ಅವರ ಮರಣಾ ನಂತರ ಕುಟುಂಬ ದಿವಾಳಿಯಾಯಿತು, ಸಾಲಗಾರರ ಬಾಧೆ ಶುರುವಾಯಿತು.ಅವರ ಕುಟುಂಬದವರು ಪೂರ್ವಜರ ಮನೆಯಿಂದ ಹೊರಗೆ ಹಾಕಿದರು.
ಅವರು ಕೆಲಸ ಹುಡುಕುವುದರಲ್ಲಿ ವಿಫಲರಾದಾಗ, ದೇವರ ಅಸ್ತಿತ್ವದ ಬಗ್ಗೆಯೇ ಸಂದೇಹಪಟ್ಟರು. ಆದರೆ ರಾಮಕೃಷ್ಣರ ಸಾನಿಧ್ಯ ಅವರಿಗೆ ಸಾಂತ್ವನ ನೀಡುತಿತ್ತು. ಒಂದು ದಿನ ನರೇಂದ್ರರು ಅವರ ಕುಟುಂಬದ ಅಭ್ಯುದಯಕ್ಕೋಸ್ಕರ ಕಾಳಿ ದೇವಿಯನ್ನು ಪ್ರಾರ್ಥಿಸುವಂತೆ ರಾಮಕೃಷ್ಣರನ್ನು ಕೇಳಿಕೊಂಡರು. ಅದಕ್ಕೆ ಅವರು ನೀನೊಬ್ಬನೇ ದೇವಸ್ಥಾನಕ್ಕೆ ಹೋಗಿ ಭಕ್ತಿಯಿಂದ ಪ್ರಾರ್ಥಿಸು ಎಂದು ಸಲಹೆ ನೀಡಿದರು. ಅವರ ಸಲಹೆಯಂತೆ ಎರಡು, ಮೂರು ಸಲ ದೇವಸ್ಥಾನಕ್ಕೆ ಹೋದರು.
ಆದರೆ ಅವರು ಯಾವುದೇ ರೀತಿಯ ಲೌಕಿಕ ಅವಶ್ಯಕತೆಗಳನ್ನು ಪೂರೈಸಲು ದೇವಸ್ಥಾನಕ್ಕೆ ಹೋಗಿ ಪ್ರಾರ್ಥಿಸುವುದರಲ್ಲಿ ವಿಫಲರಾದರು. ಆದರೆ ಪ್ರತಿ ಬಾರಿಯು ಮುಕ್ತಿಗಾಗಿ ಕೇಳಿಕೊಳ್ಳಲಷ್ಟೇ ಶಕ್ತರಾದರು. ಕೊನೆಗೆ ಅವರು ಸರ್ವಸಂಗ ಪರಿತ್ಯಾಗ ಮಾಡಿ ರಾಮಕೃಷ್ಣರನ್ನು ಗುರುಗಳನ್ನಾಗಿ ಸ್ವೀಕಾರ ಮಾಡಿದರು. ೧೮೮೫ ರಲ್ಲಿ ರಾಮಕೃಷ್ಣರು ಕಲ್ಕತ್ತಾದ ಕೊಸ್ಸಿಪುರದಲ್ಲಿ ಇರುವ ಅವರ ತೋಟದ ಮನೆಯಲ್ಲಿ ಗಂಟಲಿನ ಹುಣ್ಣಿನಿಂದ ಬಳಲುತಿದ್ದರು.
ನರೇಂದ್ರರು ತಮ್ಮ ಆಧ್ಯಾತ್ಮಿಕ ವಿಧ್ಯಾಭ್ಯಾಸವನ್ನು ಮುಂದುವರಿಸಿದರು. ಅವರು ಕೊಸ್ಸಿಪುರದಲ್ಲಿ ನಿರ್ವಿಕಲ್ಪ ಸಮಾಧಿಯನ್ನು ಅನುಭವಿಸಿದರು. ನರೇಂದ್ರ ಮತ್ತು ರಾಮಕೃಷ್ಣರ ಇತರ ಶಿಷ್ಯರು ಗುರುಗಳ ಅದೇಶದಂತೆ ಅವರಂತೆ ನಿಲುವಂಗಿ ಮತ್ತು ಕಾವಿ ತೊಟ್ಟುಕೊಂಡರು. ಜನ ಸೇವೆಯೇ ಜನಾರ್ದನನ ಸೇವೆ ಎಂದರು. ರಾಮಕೃಷ್ಣರು ನರೇಂದ್ರರನ್ನು ತಮ್ಮ ಶಿಷ್ಯವೃಂದದ ನಾಯಕರನ್ನಾಗಿ ನೇಮಿಸಿದರು. ರಾಮಕೃಷ್ಣರು ೧೮೮೬, ಆಗಸ್ಟ ೧೬ ರಂದು ನಿಧನ ಹೊಂದಿದರು.


ರಾಮಕೃಷ್ಣ ಮಠದ ಸ್ಥಾಪನೆ

ರಾಮಕೃಷ್ಣರ ಮರಣಾ ನಂತರ ಅವರ ಮಠಕ್ಕೆ ಬರುವ ಆದಾಯವು ಕಡಿಮೆಯಾಯಿತು. ಇದರಿಂದಾಗಿ ಅವರು ಬೇರೆ ಜಾಗವನ್ನು ಹುಡುಕಬೇಕಾಯಿತು. ಬಾರನಗರದಲ್ಲಿ ನರೇಂದ್ರರು ಶಿಥಿಲವಾದ ಮನೆಯನ್ನು ಖರೀದಿಸಿ, ಆ ಮನೆಯನ್ನು ಅವರು ಮಠವನ್ನಾಗಿ ಪರಿವರ್ತಿಸಲು ಆಲೋಚಿಸಿದರು. ಆ ಮನೆಯ ಬಾಡಿಗೆಯನ್ನು ಭಿಕ್ಷಾಟನೆ ಮೂಲಕ ತುಂಬುತಿದ್ದರು.
ಈ ಮನೆಯೆ ರಾಮಕೃಷ್ಣರ ಮಠದ ಮೊದಲ ಶಾಖೆಯಾಯಿತು. ಅಲ್ಲಿ ನರೇಂದ್ರ ಮತ್ತು ಅವರ ಶಿಷ್ಶರು ಹೆಚ್ಚಿನ ಸಮಯವನ್ನು ಧ್ಯಾನ ಮತ್ತು ಧಾರ್ಮಿಕ ವಿಷಯಗಳನ್ನು ಅಭ್ಯಾಸ ಮಾಡುವಲ್ಲಿ ಹೆಚ್ಚಿನ ಸಮಯವನ್ನು ಕಳೆಯುತ್ತಿದ್ದರು. ಮುಂದಿನ ಆ ದಿನಗಳನ್ನು ನೆನೆಸುತ್ತಾ "ಪ್ರತಿದಿನ ಬೆಳಿಗ್ಗೆ ೩ ರಿಂದ ರಾತ್ರಿಯವರೆಗು ನಾವು ಧ್ಯಾನದಲ್ಲೆ ಕಳೆಯುತ್ತಿದ್ದೆವು.
ಜಗತ್ತಿನ ಪರಿವೆಯೆ ಇಲ್ಲದೆ, ನಮ್ಮ ಸಾಧನಾ ಪ್ರಪಂಚದಲ್ಲಿ ಮುಳುಗಿದ್ದೆವು" ೧೮೮೧ ನೇ ಇಸವಿಯಲ್ಲಿ ನರೇಂದ್ರರು ವೈಷ್ಣವ ಚರಣ್ ಬಾಸ್ಕರವರ ಜೊತೆ ಬಂಗಾಳಿ ಭಾಷೆಯ ಕವಿತೆಗಳನ್ನೊಳಗೊಂಡ "ಸಂಗೀತ ಕಲ್ಪತರು "ಎಂಬ ಪುಸ್ತಕವನ್ನು ಸಂಗ್ರಹಿಸಿದರು. ಆದರೆ ಹಲವು ಸಮಸ್ಯೆಗಳಿಂದ ಅದನ್ನು ಪ್ರಕಟಿಸಲಾಗಲಿಲ್ಲ..


ವಿವೇಕಾನಂದರ ಭಾರತ ಪರ್ಯಟನೆ

೧೮೮೮ ನರೇಂದ್ರರು ಭಾರತ ಪರ್ಯಟನೆಗೆ ಹೊರಟರು. ಅವರು ಪರ್ಯಟನೆಗೆ ಹೋಗುವಾಗ ಅವರ ಜೊತೆಗೆ ಕಮಂಡಲು ದಂಡ ಮತ್ತು ಅವರಿಗೆ ಪ್ರಿಯವಾದ ಭಗವತ್ ಗೀತೆ ಹಾಗು " ದಿ ಇಮಿಟೆಶ್ನ್ ಒಫ಼್ ಕ್ರಿಸ್ತ್" ಎಂಬೆರಡು ಪುಸ್ತಕಗಳನ್ನು ತಮ್ಮ ಜೊತೆಗೆ ಒಯ್ಯುತ್ತಿದ್ದರು. ನರೇಂದ್ರರು ಸತತವಾಗಿ ಐದು ವರ್ಷಗಳ ಕಾಲ ಭಾರತವನ್ನು ಸಂಚರಿಸಿದರು.

ಉತ್ತರ ಭಾರತ

೧೮೮೮ ರಲ್ಲಿ ಗೌತಮ ಬುದ್ಧ ಮತ್ತು ಆದಿ ಶಂಕರಾಚಾರ್ಯರು ಧರ್ಮ ಪ್ರಚಾರ ಮಾಡಿದ ವಾರಣಾಸಿಗೆ ಭೇಟಿ ನೀಡಿದರು. ಅಲ್ಲಿ ಅವರು ಬಂಗಾಳಿ ಬರಹಗಾರ ಭೂದೇವ ಮುಖ್ಯೋಪಾಧ್ಯಾಯ ಮತ್ತು ಹಿಂದು ಸಂತ ತ್ರ್ಯೆಲಂಗ ರನ್ನು ಭೇಟಿ ಮಾಡಿದರು. ಭೂದೇವ ಮುಖ್ಯೋಪಾಧ್ಯಾಯರು " ಇಂತಹ ದೂರದೃಷ್ಟಿ ಮತ್ತು ವಿಚಾರವಾದವನ್ನು ಇಷ್ಟು ಕಿರಿಯ ಪ್ರಾಯದಲ್ಲಿ ಪಡೆದುಕೊಂಡ ನೀನು ಮುಂದೊಂದು ದಿನ ದೊಡ್ಡ ವ್ಯಕ್ತಿಯಾಗುವೆ" ಎಂದು ಪ್ರಶಂಸಿಸಿದರು. ನಂತರ ಸಂಸ್ಕ್ರತ ಮತ್ತು ವ್ಯೆದಿಕ ವಿದ್ವಾಂಸರಾದ ಬಾಬು ಪರಮದಾಸ್ ಮಿತ್ರ ಅವರನ್ನು ಭೇಟಿ ಮಾಡಿದರು. ನಂತರ ಅವರು ಅಯೋಧ್ಯಾ, ಲಕ್ನೋ ವೃಂದಾವನ ಮತ್ತು ಋಷಿಕೇಶಕ್ಕೆ ಭೇಟಿ ನೀಡಿದರು

ಅದ್ವೈತ ಸಿದ್ಧಾಂತದ ಉಪಯುಕ್ತತೆ

ಕೇವಲ ರಾಮಕೃಷ್ಣ ಪರಮಹಂಸರ ಶಿಷ್ಯರಾಗದೆ ತಮ್ಮದೇ ಶೈಲಿಯಲ್ಲಿ ದೊಡ್ಡ ಚಿಂತಕರಾಗಿ ವಿವೇಕಾನಂದರು ಹೆಸರು ಪಡೆದಿದ್ದಾರೆ. ಅವರ ಮುಖ್ಯ ಕಾಣಿಕೆಯೆಂದರೆ ಕೇವಲ ತಾತ್ವಿಕವಾಗಿ ಉಚ್ಚ ತತ್ತ್ವಜ್ಞಾನ ಮಾತ್ರವಲ್ಲದೆ ಸಾಮಾಜಿಕ ಹಾಗೂ ರಾಜಕೀಯ ದೃಷ್ಟಿಯಿಂದಲೂ ಉಪಯುಕ್ತ ಎಂಬುದನ್ನು ತೋರಿಸಿಕೊಟ್ಟರು. ಅವರ ಅಭಿಪ್ರಾಯದಂತೆ, ರಾಮಕೃಷ್ಣರಿಂದ ಅವರು ಪಡೆದ ಮುಖ್ಯ ಬೋಧನೆಗಳಲ್ಲಿ ಒಂದೆಂದರೆ ಎಲ್ಲರಲ್ಲಿಯೂ ದೇವರಿದ್ದಾನೆ ಎಂಬುದು.
ಇದೇ ಅವರ ಮಂತ್ರವಾಯಿತು ಮತ್ತು ಅವರ "ದರಿದ್ರ ನಾರಾಯಣ ಸೇವೆ' ಎಂಬ ತತ್ತ್ವಕ್ಕೆ ದಾರಿ ಮಾಡಿ ಕೊಟ್ಟಿತು. ಈ ತತ್ತ್ವದಂತೆ ಬಡ ಜನರ ಸೇವೆಯಲ್ಲಿಯೇ ದೇವರ ಸೇವೆಯನ್ನು ಮಾಡುವ ದಾರಿಯನ್ನು ಅವರು ಪಾಲಿಸಿದರು. ಎಲ್ಲರಲ್ಲಿಯೂ ದೇವರಿದ್ದು ಎಲ್ಲರೂ ಸಮಾನರೆಂದಾದ ಮೇಲೆ ಕೆಲವರಿಗೆ ಮಾತ್ರ ಏಕೆ ಹೆಚ್ಚು ಬೆಲೆ ಬರಬೇಕು ಎಂಬ ಪ್ರಶ್ನೆಯನ್ನು ವಿವೇಕಾನಂದರು ಕೇಳಿಕೊಂಡರು.
ಅವರ ಅಂತಿಮವಾದ ತೀರ್ಮಾನವೆಂದರೆ ಭಕ್ತನು ಮೋಕ್ಷವನ್ನು ಅನುಭವಿಸಿದಾಗ ನಮ್ಮಲ್ಲಿರುವ ಎಲ್ಲ ಭೇದಗಳೂ ಮಾಯವಾಗಿ, ಉಳಿಯುವುದೆಂದರೆ ಬ್ರಹ್ಮನೊಂದಿಗೆ ತಮ್ಮ ಐಕ್ಯವನ್ನು ಅರಿಯದ ಮತ್ತು ಕೆಳತುಳಿಯಲ್ಪಟ್ಟಿರುವ ಜನರ ಬಗೆಗೆ ಸಂತಾಪ ಮತ್ತು ಅವರಿಗೆ ಸಹಾಯ ಮಾಡುವ ಸದೃಢ ನಿಶ್ಚಯ.

ವಿವೇಕಾನಂದರ ವಿಶ್ವಪರ್ಯಟನೆ

ವಿವೇಕಾನಂದರು ಭಾರತದ ತತ್ವಜ್ಞಾನ, ಯೋಗ, ವೇದಾಂತ ಇವೆಲ್ಲವನ್ನು ಪಾಶ್ಚಿಮಾತ್ಯದೇಶಗಳಲ್ಲಿ ಪ್ರಚಾರ ಮಾಡಿದರು. ಅವರು ತಮ್ಮ ಗುರುಗಳ ಒಳ್ಳೆಯ ಮನೋಭಾವದ ಕಡೆಗೆ ವಾಲಿದರು. ಅವರು ಸನ್ಯಾಸಿಯಾಗಿ ದೇವರಸೇವೆ ಹೇಗೆ ಮಾಡಬಹುದೆಂದು ನಿರೂಪಿಸಿದರು. ಗುರು ರಾಮಕೃಷ್ಣರ ಮರಣಾ ನಂತರ ವಿವೇಕಾನಂದರು ಭಾರತ ಪ್ರವಾಸ ಕೈಗೊಂಡರು.
ಭಾರತದ ಉಪಖಂಡದಲ್ಲಿ ಬ್ರಿಟೀಷರ ಷರತ್ತುಗಳನ್ನು ಆಧ್ಯಯನ ಮಾಡಿದರು. ನಂತರ ಅವರು ಅಮೇರಿಕಾ ಪ್ರವಾಸ ಕೈಗೊಂಡರು. ೧೮೯೩ರಲ್ಲಿ ಚಿಕಾಗೋದಲ್ಲಿ ನಡೆದ ಸಮ್ಮೇಳನದಲ್ಲಿ ಭಾರತೀಯರ ಧಾರ್ಮಿಕತೆಯನ್ನು ಎತ್ತಿ ಹಿಡಿದರು. ವಿವೇಕಾನಂದರು ನೂರಕ್ಕು ಹೆಚ್ಚು ಖಾಸಗಿ ಹಿಂದೂಸಂಸ್ಥೆಗಳಲ್ಲಿ ತಮ್ಮ ವಿಚಾರಧಾರೆಯನ್ನು ಹರಿಸಿದರು. ದೇಶ ವಿದೇಶಗಳಲ್ಲಿ ಹಿಂದೂಧರ್ಮದ ತತ್ವವನ್ನು ಭೋಧಿಸಿದರು.
ಅವರು ಪ್ರಪಂಚದಾದ್ಯಂತ ಪ್ರಯಾಣ ಮಾಡಿ, ಅಲ್ಲಿನ ಭಕ್ತರನ್ನುದ್ದೇಶಿಸಿ ಮಾಡಿದ ಭಾಷಣಗಳನ್ನು ಒಟ್ಟುಗೂಡಿಸಿ ಬರೆಯಲ್ಪಟ್ಟ ಅವರ ನಾಲ್ಕು ಪುಸ್ತಕಗಳು ಹಿಂದೂ ಧರ್ಮದ ಯೋಗ ಸಿದ್ಧಾಂತವನ್ನು ತಿಳಿಯ ಬಯಸುವವರಿಗೆ, ಮೂಲಭೂತ ಪಠ್ಯಗಳೆಂದೇ ಪರಿಗಣಿತವಾಗಿವೆ. *ವಿವೇಕಾನಂದರ ನಂಬಿಕೆಗಳಲ್ಲಿ ಮುಖ್ಯವಾದುದು ನಮ್ಮಲ್ಲಿ ಎಲ್ಲರೂ ಮುಕ್ತರಾಗುವವರೆಗೆ ಯಾರೊಬ್ಬರೂ ಮುಕ್ತರಾಗಲಾರರೆಂಬುದು.
ವೈಯಕ್ತಿಕ ಮುಕ್ತಿಯ ಆಸೆಯನ್ನು ಬಿಟ್ಟು ಎಲ್ಲರ ಮುಕ್ತಿಗಾಗಿ ಶ್ರಮಿಸುವವನೇ ಅವರ ದೃಷ್ಟಿಯಲ್ಲಿ ಪ್ರಬುದ್ಧ ವ್ಯಕ್ತಿ. ವಿವೇಕಾನಂದರು, ಧರ್ಮ ಮತ್ತು ಸರ್ಕಾರ ದ ನಡುವೆ ಕಟ್ಟುನಿಟ್ಟಾದ ದೂರವಿಡುವಂತೆ ಮನವಿ ಮಾಡಿದರು. ಸಾಮಾಜಿಕ ಕಟ್ಟಲೆಗಳು ಧರ್ಮದ ಮೂಲಕ ರೂಪುಗೊಂಡಿರುತ್ತವೆಯಾದರೂ, ಸರ್ಕಾರಿ ಕೆಲಸಗಳಲ್ಲಿ ಯಾವುದೇ ಒಂದು ಧರ್ಮಕ್ಕೆ ಪ್ರಾಶಸ್ತ್ಯವಿರಬಾರದು ಎಂದು ಅವರ ನಂಬಿಕೆಯಾಗಿತ್ತು.
ಅವರ ಕಲ್ಪನೆಯ ಆದರ್ಶ ಸಮಾಜವೆಂದರೆ ಬ್ರಾಹ್ಮಣ ಜ್ಞಾನ, ಕ್ಷತ್ರಿಯ ಸಂಸ್ಕೃತಿ, ವೈಶ್ಯ ದಕ್ಷತೆ ಮತ್ತು ಶೂದ್ರರ ಸಮಾನತೆಯ ಮೇಲೆ ನಿಂತಿರುವಂಥ ಸಮಾಜ. ಯಾವುದೇ ಒಂದು ವರ್ಗದ ಪ್ರಾಶಸ್ತ್ಯ ಸಮಾಜದಲ್ಲಿ ಸಮಾನತೆಯನ್ನು ಹಾಳುಗೆಡವುತ್ತದೆ ಎಂಬುದು ಅವರ ಸಾಮಾಜಿಕ ದೃಷ್ಟಿ. ಆಳವಾಗಿ ಸಮಾಜವಾದಿಯಾಗಿದ್ದರೂ, ಧರ್ಮದ ಮೂಲಕ ಸಮಾಜವಾದವನ್ನು ಹೇರುವುದು ತಪ್ಪೆಂದೂ, ಸಮಾಜವಾದ ಎಂಬುದು ವೈಯಕ್ತಿಕವಾಗಿ ಸಂದರ್ಭ ಸರಿಯಿದ್ದಾಗ ಜನರು ಕೈಗೊಳ್ಳಬೇಕಾದ ನಿರ್ಧಾರವೆಂದೂ ಅವರ ದೃಷ್ಟಿ.

ಸರ್ವಧರ್ಮಸಮ್ಮೇಳನದಲ್ಲಿ ಮಾಡಿದ ಭಾಷಣ

ಸರ್ವಧರ್ಮಸಮ್ಮೇಳನ, ದ ಭಾಷಣದಲ್ಲಿ ಪ್ರತಿಪಾದಿಸಿದ ಹಿಂದೂ ಧರ್ಮದ ಸಿದ್ಧಾಂತಗಳು, ಮಿಂಚಿನಂತೆ ಅಲ್ಲಿನ ಜನರನ್ನು ಆಕರ್ಶಿಸಿದವು. ವಿವೇಕಾನಂದರ ಅತಿ ಪ್ರಸಿದ್ಧ ಯಶಸ್ಸು೧೮೯೩ ರಲ್ಲಿ ಶಿಕಾಗೊ ನಗರದಲ್ಲಿ ನಡೆದ ಪ್ರಪಂಚ ಮತಗಳ ಸಂಸತ್ತಿನಲ್ಲಿ ಬಂದಿತು. ಅವರ ಭಾಷಣದಲ್ಲಿ ಮೊದಲ ವಾಕ್ಯವಾಗಿದ್ದ "ಅಮೆರಿಕದ ಸಹೋದರ ಸಹೋದರಿಯರೇ" ಎಂಬ ವಾಕ್ಯ ಚಿರಸ್ಮರಣೀಯವಾಗಿದೆ.
ಈ ಸಂದರ್ಭದಲ್ಲಿಯೇ ಪಾಶ್ಚಾತ್ಯ ರಾಷ್ಟ್ರಗಳಲ್ಲಿ ಹಿಂದೂ ಧರ್ಮದ ಬಗೆಗೆ ಆಸಕ್ತಿಯನ್ನೂ ಕೆರಳಿಸಿದರು. 'ಪೂರ್ವ ದೇಶದ ವಿಚಿತ್ರ ಧರ್ಮ' ಎಂದು ಪರಿಗಣಿತವಾಗಿದ್ದ ಹಿಂದೂ ಧರ್ಮದ ತಾತ್ವಿಕ ಹಾಗೂ ಧಾರ್ಮಿಕ ಮೂಲಭೂತ ಮಹತ್ವವುಳ್ಳ ಸಂಪ್ರದಾಯಗಳು, ಪಾಶ್ಚಾತ್ಯ ರಾಷ್ಟ್ರಗಳಲ್ಲಿಯೂ ಗುರುತಿಸಲ್ಪಟ್ಟವು. ಈ ಸಂದರ್ಭದ ಕೆಲವೇ ವರ್ಷಗಳಲ್ಲಿ 'ನ್ಯೂಯಾರ್ಕ್' ಮತ್ತು 'ಲಂಡನ್' ನಗರಗಳಲ್ಲಿ ವೇದಾಂತ ಕೇಂದ್ರಗಳನ್ನು ಸ್ಥಾಪಿಸಿ ಅನೇಕ ವಿಶ್ವವಿದ್ಯಾಲಯಗಳಲ್ಲಿ ಭಾಷಣಗಳನ್ನು ಮಾಡಿದರು.
ಇದರ ನಂತರ ಭಾರತಕ್ಕೆ ಮರಳಿ ರಾಮಕೃಷ್ಣ ಮಿಷನ್ ಅನ್ನು ಸ್ಥಾಪಿಸಿದರು. ಹಾಗೆಯೇ "ಆತ್ಮನೋ ಮೋಕ್ಷಾರ್ಥಂ ಜಗದ್ ಹಿತಾಯ ಚ" (ಸ್ವತಃ ಮೋಕ್ಷಕ್ಕಾಗಿ ಮತ್ತು ಜಗತ್ತಿನ ಹಿತಕ್ಕಾಗಿ) ಎಂಬ ತತ್ತ್ವವನ್ನೂ ಸ್ಥಾಪಿಸಿದರು. ಇದು ಈಗ ಭಾರತದ ಧಾರ್ಮಿಕ ಸಂಸ್ಥೆಗಳಲ್ಲಿ ಬಹಳ ಹೆಸರು ಮಾಡಿರುವ ಮತ್ತು ಗೌರವಿತ ಸಂಸ್ಥೆಯಾಗಿದೆ.
'ಸ್ವಾಮಿ ವಿವೇಕಾನಂದ'ರು ದಿವಂಗತರಾದಾಗ ಕೇವಲ ೩೯ ವರ್ಷದವರಾಗಿದ್ದರು. ಯುವಕರಿಗೆ ದಾರಿ ದೀಪವಾಗಿದ್ದರು. ಸ್ವಾಮಿ ಅವರ ಭಾಷಣದ ಆಯ್ದ ಭಾಗ ಹೀಗಿದೆ:-"ನಾನು ಮಾಡಿರುವ ಅಲ್ಪ ಕಾರ್ಯ ಕೇವಲ ನನ್ನಲ್ಲಿರುವ ಶಕ್ತಿಯಿಂದಲ್ಲ. ನನ್ನ ಪರಮಮಿತ್ರ ಪ್ರಿಯತಮ ಮಾತೃಭೂಮಿಯಿಂದ ಹೊರಟ ಉತ್ತೇಜನ ಶುಭಾಶಯ ಆಶೀರ್ವಾದಗಳು".

ಸ್ವದೇಶ ಮಂತ್ರ

ಆರ್ಯಮಾತೆಯ ಅಮೃತಪುತ್ರರಿರಾ, ಮರೆಯದಿರಿ, ನಿಮ್ಮ ಸ್ತ್ರೀಯರ ಆದರ್ಶ ಸೀತಾ, ಸಾವಿತ್ರಿ, ದಮಯಂತಿಯರು. ಮರೆಯದಿರಿ, ನೀವು ಪೂಜಿಸುವ ಜಗದೀಶ್ವರನು ತ್ಯಾಗಿಕುಲ ಚೂಡಾಮಣಿ, ಉಮಾವಲ್ಲಭ ಶಂಕರ. ಮರೆಯದಿರಿ, ನಿಮ್ಮ ವಿವಾಹ, ನಿಮ್ಮ ಐಶ್ವರ್ಯ, ನಿಮ್ಮ ಜೀವನ ಬರಿಯ ಇಂದ್ರಿಯ ಭೋಗಕ್ಕಲ್ಲ, ವ್ಯಕ್ತಿಗತ ಸುಖಕ್ಕಲ್ಲ. ಮರೆಯದಿರಿ, ನಿಮ್ಮ ಜನ್ಮವಿರುವುದೇ ಜಗನ್ಮಾತೆಯ ಅಡಿದಾವರೆಗಳಲ್ಲಿ ಬಲಿದಾನಕ್ಕಾಗಿ!
ಮರೆಯದಿರಿ, ನಿಮ್ಮ ಸಾಮಾಜಿಕ ರಚನೆ ಅನಂತ ವಿಶ್ವವ್ಯಾಪಿ ಜಗಜ್ಜನನಿಯ ಕಾಂತಿಯನ್ನು ಪ್ರತಿಬಿಂಬಿಸುವುದಕ್ಕಾಗಿ ಇರುವುದು. *ಮರೆಯದಿರಿ, ಅಂತ್ಯಜರು, ಮೂಢರು, ದರಿದ್ರರು, ನಿರಕ್ಷರಕುಕ್ಷಿಗಳು, ಚಂಡಾಲರು ಮತ್ತು ಚಮ್ಮಾರರು - ಎಲ್ಲರೂ ನಿಮ್ಮ ರಕ್ತಬಂಧುಗಳಾದ ಸಹೋದರರು ! ವೀರಾತ್ಮರೇ, ಧೀರರಾಗಿ, ನೆಚ್ಚುಗೆಡದಿರಿ. ಭಾರತೀಯರು ನಾವು ಎಂದು ಹೆಮ್ಮೆ ತಾಳಿ. ಸಾರಿ ಹೇಳಿ, ಭಾರತೀಯರು ನಾವು, ಭಾರತೀಯರೆಲ್ಲ ನಮ್ಮ ಸಹೋದರರು.
ಸಾರಿ ಹೇಳಿ, ಮೂರ್ಖ ಭಾರತೀಯರೂ ನಮ್ಮ ಸಹೋದರರು, ಬ್ರಾಹ್ಮಣ ಭಾರತೀಯರೆಮ್ಮ ಸಹೋದರರು, ಪಂಚಮ ಭಾರತೀಯರೆಮ್ಮ ಸಹೋದರರು. ನೀವು ಒಂದು ಚಿಂದಿಬಟ್ಟೆಯನ್ನು ಸೊಂಟಕ್ಕೆ ಕಟ್ಟಿಕೊಂಡಿದ್ದರೂ ಕೂಡ, ಅಭಿಮಾನಪೂರ್ವಕವಾಗಿ ದಿಕ್‌ತಟಗಳು ಅನುರಣಿತವಾಗುವಂತೆ ತಾರಸ್ವರದಿಂದ ಸಾರಿ ಹೇಳಿ "ಭಾರತೀಯರು ನಮ್ಮ ಸಹೋದರರು, ಭಾರತೀಯರು ನಮ್ಮ ಪ್ರಾಣ. ಭಾರತೀಯ ದೇವ ದೇವತೆಗಳೆಲ್ಲರೂ ನಮ್ಮ ದೇವರು. ಭಾರತೀಯ ಸಮಾಜ, ನಮ್ಮ ಬಾಲ್ಯದ ತೊಟ್ಟಿಲು, ತಾರುಣ್ಯದ ನಂದನವನ, ವೃದ್ಧಪ್ಯದ ವಾರಾಣಸಿ". ಸಹೋದರರೆ, ಹೀಗೆ ಸಾರಿ "ಭಾರತ ಭೂಮಿಯೆ ನಮ್ಮ ಪರಂಧಾಮ. ಭಾರತದ ಶುಭವೆ ನಮ್ಮ ಶುಭ." ಹಗಲೂ ರಾತ್ರಿಯೂ ಇದು ನಿಮ್ಮ ಪ್ರಾರ್ಥನೆಯಾಗಲಿ, "ಹೇ ಗೌರೀನಾಥ, ಹೇ ಜಗನ್ಮಾತೆ, ಪೌರುಷವನ್ನು ಎಮಗೆ ದಯಪಾಲಿಸು. ಹೇ ಸರ್ವಶಕ್ತಿಶಾಲಿನಿ, ನಮ್ಮ ದೌರ್ಬಲ್ಯವನ್ನು ದಹಿಸು. ಕ್ಲೈಬ್ಯವನ್ನು ಹೋಗಲಾಡಿಸು. ನಮ್ಮ ಷಂಡತನವನ್ನು ಹೋಗಲಾಡಿಸಿ, ನಮ್ಮಲ್ಲಿ ವೀರತ್ವವನ್ನು ತುಂಬು.