* ನನ್ನ ಬದುಕಿನಲ್ಲಿ ಬಂದ ಎಲ್ಲರನ್ನು ಪ್ರೀತಿಸಿದ ಅವಧಿ ಮುಗಿದಾಯ್ತು. ಈಗ ನನ್ನನ್ನು ಪ್ರೀತಿಸುವ ಸರತಿ ಬಂದಿದೆ.
* ಇಡೀ ಜಗತ್ತನ್ನು ನನ್ನ ಭುಜದ ಮೇಲೆ ಹೊರಲು ನಾನೇನು ಅಟ್ಲಾಸ್ ನಕ್ಷೆಯಲ್ಲ, ನನಗು ಮಿತಿಯಿದೆ.
* ಇತರರು ತಪ್ಪು ಮಾಡಬಹುದು. ಹಾಗೆಂದ್ ಮಾತ್ರಕ್ಕೆ ಅವರನ್ನು ತಿದ್ದುತ್ತಾ ಕೂರುವುದು ನನ್ನ ಕೆಲಸವಲ್ಲ ಎಂದು ಅರ್ಥವಾಗಿದೆ.
* ಎಲ್ಲರಲ್ಲೂ ಪರಿಪೂರ್ಣತೆ ಹುಡುಕುತ್ತಾ ಕುಳಿತುಕೊಳ್ಳುವ ಬದಲು ನೆಮ್ಮದಿಯತ್ತ ಮೊರೆ ಹೋಗುತ್ತೇನೆ. ನೆಮ್ಮದಿಯೆಂದರೆ ಪರಿಪೂರ್ಣತೆಗೆ ಮಿಗಿಲು.
* ಈಗ ಮೊದಲಿಗಿಂತ ಹೆಚ್ಚಾಗಿ ಒಳ್ಳೆಯದನ್ನು ಪ್ರಶಂಸಿಸಲು ಕಲಿತಿದ್ದೇನೆ. ಅದು ನನ್ನೆದುರಿನ ವ್ಯಕ್ತಿಯ ಚೈತನ್ಯವನ್ನು ಮಾತ್ರವಲ್ಲ, ನನ್ನ ಜೀವನೋತ್ಸಹವನ್ನು ಪುಷ್ಟಿಗೊಳಿಸುತ್ತಿದೆ.
* ನನ್ನ ಅಂಗಿ ಚೂರು ಹರಿದಿದ್ದರು ಅಥವಾ ಕಲೆಯಾಗಿದ್ದರು ಅದರ ಬಗ್ಗೆ ತಲೆ ಕೆಡಿಸಕೊಳುತ್ತಿಲ್ಲ ಅದೇನೇ ಆಗಲಿ ನನ್ನ ವ್ಯಕ್ತಿತ್ವ ಹೊರನೋಟಕ್ಕಿಂತ ಮಿಗಿಲು.
* ನನ್ನನ್ನು ಗೌರವಿಸದವರಿಂದ ಬಹುದೂರ ಉಳಿದು ಬಿಡುತ್ತೇನೆ. ನನಗೆ ನನ್ನ ಮೌಲ್ಯದ ಅರಿವುಳ್ಳಷ್ಟು ಅವರಿಗೆ ಎಲ್ಲಿ ಬರಬೇಕು ಅಲ್ಲವೇ?
* ನನ್ನನ್ನು ಹತ್ತಿಕ್ಕಲು ಬರುವವರ ಮುಂದೆ ಪ್ರಶಾಂತವಾಗಿ ವರ್ತಿಸುತ್ತೇನೆ. ಅವರೇ ಮುಂದೆ ಹೋಗಲಿ. ಅಷ್ಟಕ್ಕೂ ನಾನ್ಯಾವ ಓಟದ ಸ್ಪರ್ದಿಯಲ್ಲ.
* ನನ್ನದೇ ಭಾವನೆಗಳಿಂದ ನಾನು ಕಸಿವಿಸಿಗೊಳ್ಳುವುದನ್ನು ನಿಲ್ಲಿಸಿದ್ದೇನೆ. ಅಷ್ಟಕ್ಕೂ ಅವುಗಳಿಂದಲೇ ನಾನು ಮನುಷ್ಯವೆನ್ನಿಸಿಕೊಂಡಿರುವುದು.
* ಸಂಬಂಧಗಳೊಂದಿಗೆ ರಾಜಿಯಾಗುವುದನ್ನು ಕಲಿತಿದ್ದೇನೆ. ಅಷ್ಟಕ್ಕೂ ಸಂಬಂಧಗಳಿಗಿಂತ ನನ್ನ ಆಹಂಕಾರ ದೊಡ್ಡದೇನಲ್ಲ.
* ಈ ಕ್ಷಣದಲ್ಲಿ ಬದುಕುವುದನ್ನು ಕಲಿತಿದ್ದೇನೆ. ಯಾರಿಗೆ ಗೊತ್ತು? ಈ ಕ್ಷಣವೇ ನನ್ನ ಬದುಕಿನ ಅಂತಿಮ ಕ್ಷಣವಾಗಬಹುದು.
* ನನಗೆ ಸಂತೋಷ ಕೊಡುವುದನ್ನು ನಾನು ಮಾಡುತ್ತೇನೆ. ಇದು ನನ್ನ ಸಂತೋಷದ ಸರದಿ. ಅದಕ್ಕೆ ನ್ಯಾಯ ಒದಗಿಸುವುದು ನನ್ನ ಜವಾಬ್ದಾರಿ. ಸಂತೋಷಕ್ಕೆ ನ್ಯಾಯ ಒದಗಿಸುವುದೆಂದರೆ, ನನಗೆ ನಾನು ನ್ಯಾಯ ಒದಗಿಸುವುದು ಅಂದರ್ಥ.
ಯಲ್ಲಪ್ಪ ನಂದಿ.