Sunday, 2 February 2020

ಜೀವನ


ಬದುಕೊಂದು ಸಾಗರವಾದರೆ ಅದರಾಚೆ ಕಾಣುವ ದಡವ ಮುಟ್ಟಬೇಕೆಂದು ಆಸೆಪಡುವ ಆಶಾವಾದಿಗಳೆ ನಾವು. ಈ ಓಟದಲ್ಲಿ ಪಡೆಯುವುದು ಏನಿಲ್ಲ, ಕಳೆದುಕೊಳ್ಳುವುದು ಏನಿಲ್ಲ. ಹಾಗಂತ ಓಟವನ್ನು ನಿಲ್ಲಿಸುವಂತೆಯೂ ಇಲ್ಲ. ಆದರೆ ದಡ ಸಮೀಪಿಸುತ್ತಿದ್ದಂತೆ ಉಳಿಯುವುದು ನೆನಪುಗಳು ಮಾತ್ರ ಅದರಲ್ಲಿ ಮನಸಿಗೆ ಹಿತ ನೀಡುವ ಸುಂದರ ಅಲೆಗಳು ಕೆಲವಾದರೆ, ಮುಳ್ಳುಗಳಂತೆ ಚುಚ್ಚಿ ಚುಚ್ಚಿ ಕೊಲ್ಲುವ ಭುಗಿಲೆದ್ದ ಸುನಾಮಿಗಳು ಹಲವು.

ಜೀವನವನ್ನು ಸಮುದ್ರಕ್ಕೆ ಹೋಲಿಸಲು ಕಾರಣ ಸಮುದ್ರ ನೋಡಲು ಎಷ್ಟು ಶಾಂತವೋ ಒಮ್ಮಿಂದೊಮ್ಮೆಲೆ ರುದ್ರತಾಂಡವನಂತೆ ನರ್ತಿಸುತ್ತದೆ, ಹಾಗೆ ಜೀವನವು ಕೂಡ ಒಮ್ಮೆ ಸುಂದರ ಶಾಂತವೆನಿಸಿದರೂ ಅನಿರೀಕ್ಷಿತ ತಿರುವುಗಳು ಬಂದು ಅಲ್ಲೋಲಕಲ್ಲೋಲ ಮಾಡಿಬಿಡುತ್ತವೆ. ಸಮುದ್ರದಿಂದ ನಾವು ಕಲಿಯುವ ಪಾಠವೆಂದರೆ ಯಾವುದು ಇಲ್ಲಿ ಶಾಶ್ವತವಲ್ಲ ಅಲೆಗಳಂತೆ ಸುಖ ದುಃಖಗಳು ಬಂದು ಹೋಗಿ ಬಂದು ಹೋಗಿ ಮಾಡುತ್ತಲೇ ಇರುತ್ತವೆ, ಆದರೆ ನಮ್ಮ ಮನಸ್ಸನ್ನು ಮಾತ್ರ ಸಂತೋಷದಿಂದ ಹಿಗ್ಗಲೂ ಬಿಡದೇ ದುಃಖದಿಂದ ಕುಗ್ಗಲೂ ಬಿಡದೇ ದಡದಲ್ಲಿರುವ ಮರಳಿನಂತೆ ಸ್ಥಿರವಾಗಿಟ್ಟುಕೊಂಡರೆ ಜೀವನದಲ್ಲಿ ಎಂತಹ ಸಂದರ್ಭವನ್ನಾದರೂ ಅನಾಯಾಸವಾಗಿ ಎದುರಿಸಿ ದಡವನ್ನು ಸೇರಬಹುದು.

ಯಲ್ಲಪ್ಪ ನಂದಿ